Homeಮುಖಪುಟಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

ಮಹುವಾ ಹೂವಿನಿಂದ ತಯಾರಿಸಿದ ಮದ್ಯಕ್ಕೆ ಹೆರಿಟೇಜ್‌ ಸ್ಥಾನಮಾನ: ಮಧ್ಯಪ್ರದೇಶ ಸರ್ಕಾರ

- Advertisement -
- Advertisement -

ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವೆಂದು ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

ಹೊಸ ಅಬಕಾರಿ ನೀತಿಯ ಅಡಿಯಲ್ಲಿ ರಾಜ್ಯದಲ್ಲಿ ಮಹುವಾ ಹೂವಿನಿಂದ ತಯಾರಿಸಿದ ಮದ್ಯವನ್ನು ಪಾರಂಪರಿಕ ಮದ್ಯವಾಗಿ ಮಾರಾಟ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮಹುವಾ ಮಾರಾಟ ಅಥವಾ ಸೇವನೆಯು ಇಲ್ಲಿಯವರೆಗೆ ಕಾನೂನುಬಾಹಿರವಾಗಿತ್ತು!

“ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುತ್ತಿದೆ, ಅದರ ಅಡಿಯಲ್ಲಿ ಯಾರಾದರೂ ಸಾಂಪ್ರದಾಯಿಕ ರೀತಿಯಲ್ಲಿ ಮಹುವಾದಿಂದ ಮದ್ಯವನ್ನು ತಯಾರಿಸಿದರೆ, ಅದು ಇನ್ನು ಮುಂದೆ ಅಕ್ರಮವಾಗುವುದಿಲ್ಲ” ಎಂದು ಚೌಹಾಣ್ ಹೇಳಿದ್ದಾರೆ. ಇದನ್ನು “ಹೆರಿಟೇಜ್ ಮದ್ಯ” (ಪಾರಂಪರಿಕ ಮದ್ಯ) ಎಂಬ ಹೆಸರಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುವುದು. ಈ ನೀತಿಯಿಂದಾಗಿ ಮಹುವಾ ಮದ್ಯವನ್ನು ತಯಾರಿಸುವ ಬುಡಕಟ್ಟು ಜನರಿಗೆ ಉದ್ಯೋಗ ಮತ್ತು ಆದಾಯ ದೊರಕಲಿದೆ ಎಂದು ಪ್ರತಿಪಾದಿಸಲಾಗಿದೆ.

ಬಿಜೆಪಿ ಸರ್ಕಾರದ ನಡೆಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. “ಭಾರತೀಯ ಜನತಾ ಪಾರ್ಟಿಯ ನೈತಿಕ ಅಧಃಪತನ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಪ್ರತಿಕ್ರಿಯಿಸಿ, ‘ಕಚ್ಚಿ ಶರಬ್ (ದೇಸಿ ಮದ್ಯ) ಅನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಯೋಚಿಸುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ಇದರ ನಡುವೆ, ಸಮುದಾಯ ಅರಣ್ಯದ ಹಕ್ಕನ್ನು ಆದಿವಾಸಿಗಳನ್ನು ಹೊಂದಿದ್ದಾರೆ. ಅಲ್ಲಿ ಅವರು ಮರಗಳನ್ನು ನೆಡಬಹುದು, ಮರ ಮತ್ತು ಹಣ್ಣುಗಳನ್ನು ಏನು ಮಾಡಬೇಕೆಂದು ನಿರ್ಧರಿಸಬಹುದು ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಬುಡಕಟ್ಟು ಸಮುದಾಯದ ವ್ಯಕ್ತಿಗಳ ಮೇಲಿರುವ ಸುಳ್ಳು ಹಾಗೂ ಸಣ್ಣ ಪ್ರಮಾಣದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಚೌಹಾಣ್ ಘೋಷಿಸಿದ್ದಾರೆ. ಟೆಂಡು ಎಲೆ ಮಾರಾಟ ಮಾಡುವ ಹಕ್ಕನ್ನು ಬುಡಕಟ್ಟು ಜನಾಂಗದವರಿಗೂ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ಟೆಂಡು ಎಲೆಗಳನ್ನು ಬೀಡಿ ಸುತ್ತಲು ಬಳಸಲಾಗುತ್ತದೆ.

ಬುಡಕಟ್ಟು ಸಮುದಾಯಗಳಲ್ಲಿ ಕುಡಿತ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ ಎಂಬುದು ಎಲ್ಲ ಸಾಮಾಜಿಕ ಚಿಂತಕರ ಆತಂಕ. ಗೌರವಯುತ ಹಾಗೂ ಬುಡಕಟ್ಟು ಪರಂಪರೆಯನ್ನೇ ಪ್ರತಿನಿಧಿಸುವ ಪರ್ಯಾಯ ಉದ್ಯೋಗಗಳು ಸಾಕಷ್ಟಿದ್ದರೂ, ಕುಡಿತವನ್ನು ಪ್ರಚೋದಿಸುವ ಉದ್ಯೋಗದತ್ತ ಈ ಸಮುದಾಯವನ್ನು ತಳ್ಳುವುದು ಎಷ್ಟು ಸರಿ ಎಂಬುದು ಚರ್ಚೆಯಾಗುತ್ತಿದೆ.

ಸರ್ಕಾರದ ನಿರ್ಧಾರವನ್ನು ಅನೇಕರು ಟೀಕಿಸಿದ್ದಾರೆ. ‘ಪ್ರಾಚೀನ ಧೂಮಪಾನ’ ಎಂದು ಹೆಸರಿಸಿ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವಿಟರ್‌ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಿಜೆಪಿ ನಂತರ ಕಾಂಗ್ರೆಸ್ ಸರದಿ: ಇಂದು ಟಿಎಂಸಿ ಸೇರಲಿರುವ ಬಿಹಾರ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...