Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...