Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...