Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...