Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...