Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...