Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...