Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...