Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...