Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...