Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು....

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...