Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು : ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದಕ್ಕೆ ಮೋದಿ ಸರ್ಕಾರ ಹೋರಟಿರುವುದನ್ನು ಪ್ರತಿಭಟಿಸಿ ನಿಜ ರಾಜಕೀಯ ಬಲ್ಲವರು ವಿರೋಧಿಸಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

 

ವೀರ ಸಾವರ್ಕರ್ ಇಂಗ್ಲಿಷರ ವಿರುದ್ಧ ಎದ್ದು ನಿಂತ ಅಪ್ರತಿಮ ಹೋರಾಟಗಾರರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದ 20 ಬಂದೂಕುಗಳನ್ನು ತನ್ನ ತಮ್ಮನಿಗೆ ಕಳಿಸಿದವರು. ಈ ಪ್ರಕರಣದಲ್ಲಿ ಈ ತಮ್ಮ ಸಿಕ್ಕಿಹಾಕಿಕೊಂಡು ಅವರ ವಿಚಾರಣೆ ನಡೆದು ಅವರನ್ನು ಗಲ್ಲುಶಿಕ್ಷೆಗೆ ಗುರಿಮಾಡಲಾಯಿತು. ಇಂಗ್ಲೆಂಡಿನಲ್ಲಿ ಅವರ ದಸ್ತಗಿರಿಯಾಗಿ ಬ್ರಿಟಿಷ್ ಪೊಲೀಸರು ಸಾವರ್ಕರ್ ಅವರನ್ನು ಭಾರತಕ್ಕೆ ಹಡಗಿನಲ್ಲಿ ಕರೆತರುತ್ತಿದ್ದಾಗ ಅವರು ಮಾರ್ಸೆಲ್ ಬಲಲಿ ಹಡಗಿನಿಂದ ಸಮುದ್ರಕ್ಕೆ ಧುಮುಕಿ ಈಜಿಕೊಂಡು ಫ್ರಾನ್ಸ್ ದೇಶಕ್ಕೆ ನುಸುಳುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಅವರನ್ನು ಹಿಡಿದು ಬಂಧಿಸಿ ಭಾರತಕ್ಕೆ ಕರೆತಂದರು. ನ್ಯಾಯಾಲಯದ ಮುಂದೆ ನಿಲ್ಲಿಸಿದರು ಸಾವರ್ಕರ್ ಅವರಿಗೆ 6 ವರ್ಷಗಳ ಕರಿನೀರ ಶಿಕ್ಷೆ  ವಿಧಿಸಿ ಕೂಡಲೆ ಸೆರೆಮನೆಗೆ ಕಳಿಸಲಾಯಿತು. ಅಲ್ಲಿಯವರೆಗೆ ಅವರು ವೀರ ಸಾವರ್ಕರರೇ ಹೌದು.

ಕರಿನೀರಿನ ಶಿಕ್ಷೆ ಅನುಭವಿಸುತ್ತಿರುವಾಗ ಸಾವರ್ಕರರಿಗೆ ಧರ್ಮಗ್ಲಾನಿಯಾಯಿತು. ಅವರು ಬ್ರಿಟಿಷ್ ಸರ್ಕಾರಕ್ಕೆ ಪತ್ರ ಬರೆದು ‘ನಾನು ನಿಮ್ಮ ವಿರುದ್ಧ ನಿಂತು ಸ್ವಾತಂತ್ರ್ಯ ಸಮರದಲ್ಲಿ ಭಾಗವಹಿಸಿದ್ದು ತಪ್ಪಾಯಿತು. ನನ್ನನ್ನು ಸೆರೆಮನೆಯಿಂದ ಬಿಡುಗಡೆಮಾಡಿ, ನಿಮ್ಮ ಆಜ್ಞಾಧಾರಕನಾಗಿ ನಡೆದುಕೊಳ್ಳುತ್ತೇನೆ’ ಎಂದು ವಿನಂತಿಸಿಕೊಂಡರು. ಬ್ರಿಟಿಷರು ಸಾವರ್ಕರರನ್ನು ಷರತ್ತುಗಳನ್ನು ಹೊರೆಸಿ ಬಿಡುಗಡೆ ಮಾಡಿದರು. ನೀವು ಮಹಾರಾಷ್ಟ್ರದ ನಿಮ್ಮ ಜಿಲ್ಲೆ ಬಿಟ್ಟು ಬೇರೆಡೆಗೆ ಹೊಗುವಂತಿಲ್ಲ, ಪತ್ರಿಕೆಗಳಿಗೆ ಹೇಳಿಕೆ ನೀಡುವಂತಿಲ್ಲ, ಲೇಖನ ಬರೆಯುವಂತಿಲ್ಲ ಮುಂತಾದ ಕಠಿಣ ನಿಯಮಗಳನ್ನು ಹೇರಿ ಅವರನ್ನು ಬಿಡುಗಡೆ ಮಾಡಿದರು.

ಅಲ್ಲಿಯವರೆಗೆ ವೀರ ಸಾರ್ವರ್ಕರರಾಗಿದ್ದ ಅವರು ಅಂದಿನಿಂದ ಹೇಡಿ ಸಾರ್ವರ್ಕರ್ ಆದರು. ಒಬ್ಬ ಪ್ರಾಮಾಣಿಕ ಹೋರಾಟಗಾರನಿಗೆ ಈ ಬಗೆಯ ಹೇಡಿತನ ಹೇಗೆ ಪ್ರಾಪ್ತವಾಯಿತು? ತಾನು ಸ್ವಾತಂತ್ರ್ಯ ಹೋರಾಟಕ್ಕೆ ಇಳಿದು ತಪ್ಪು ಮಾಡಿದೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಬರೆಯಬೇಕಾದ ದುಸ್ಥಿತಿ ಬಂದದ್ದು ಏಕೆ ಎಂಬುದು ಇಂದಿಗೂ ಚಿದಂಬರ ರಹಸ್ಯವಾಗಿದೆ. ಸಾವರ್ಕರರ ಬಗೆಗೆ ಜನರಿಗೆ ಇದ್ದ ಗೌರವ ತಾವಾಗಿಯೇ ಕಳೆದುಕೊಂಡರು. ಇಂತಹ ಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ಆಭಾಸವಲ್ಲವೇ?

ಅಲ್ಲದೆ ಅಲ್ಲಿಂದ ಮುಂದಕ್ಕೆ ಅವರು ಹಿಂದು ಮಹಾಸಭೆ ಸೇರಿಕೊಂಡು ನಾಥುರಾಮ್ ಗೋಡ್ಸೆಗೆ ಮಹಾತ್ಮಗಾಂಧಿಯವರನ್ನು ಕೊಲ್ಲಲು ಪ್ರೇರಕ ಶಕ್ತಿಯಾದರು. ಗಾಂಧಿ ಕೊಲೆ ಮೊಕದ್ದಮೆಯಲ್ಲಿ ಸಾವರ್ಕರರೂ ಒಬ್ಬ ಅಪರಾಧಿಯಾಗಿದ್ದರು. ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು. ಗೋಡ್ಸೆಗೆ ಇವರು ಪ್ರೇರಕ ಶಕ್ತಿಯಾಗಿದ್ದರು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಅಂಥದರಲ್ಲಿ ರಣಹೇಡಿ ಸಾವರ್ಕರರಿಗೆ ಭಾರತರತ್ನ ನೀಡುವುದು ದುರದೃಷ್ಟಕರ. ಗೋಡ್ಸೆಗೆ ಭಾರತರತ್ನ ನೀಡುವುದು ಎಷ್ಟು ಮೂರ್ಖತನವೋ ಅಷ್ಟೇ ಮೂರ್ಖತನ ಸಾವರ್ಕರರಿಗೆ ಭಾರತರತ್ನ ನೀಡುವುದು. ಗಾಂಧಿಯನ್ನು ಕೊಂದ ಗೋಡ್ಸೆಯ ದೇವಸ್ಥಾನ ಕಟ್ಟುವ ಮೂರ್ಖರು ಸಾವರ್ಕರ್‌ಗೆ ಭಾರತರತ್ನ ಕೊಡಿ ಎಂದು ಕೇಳಲು ಹೇಸುವವರಲ್ಲ.


ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಬಿ.ಜೆ.ಪಿ.ಯ ಆಡಳಿತ ಮುಂದುವರಿದರೆ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ಭಾರತ ರತ್ನ ಕೊಟ್ಟರೂ‌ ಅಚ್ಚರಿ ಇಲ್ಲ.

    • ಅವನು ಗಾಂಧಿಯನ್ನು ಏಕೆ ಕೊಂದ ಎನ್ನುವ ಪ್ರಶ್ನೆಗೆ ಉತ್ತರವಿದೆಯೇ

  2. ಜಿಂದಾಬಾದ್ ಜಿಂದಾಬಾದ್ ಸಾವರ್ಕರ್ ಜಿಂದಾಬಾದ್……
    ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಅವರಿಗೆ benefit of doubt ನೀಡಿ ಬಿಡುಗಡೆ ಮಾಡಲಾಯಿತು .. court nali Case Mugidi mele Nimadu Enu ? DOWN DOWN h S d…

    • ಸಾವರ್ಕರ್ ಗಾಂಧಿ ಹತ್ಯೆ ಸಂಚಿನ ಪ್ರೇರಕ ಎನ್ನಲು ನಿಮ್ಮ ಹತ್ತಿರ ಸಾಕ್ಷ್ಯಧಾರಗಳಿವೆಯೇ?
      ಗೋಡ್ಸೆ ಗಾಂಧಿಯನ್ನು ಏಕೆ ಕೊಂದ ಎಂದು ಉತ್ತರವಿದೆಯೇ.

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...