Homeಕರ್ನಾಟಕಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

‘ಹೇ ಹಿಂದೂ ಎದ್ದೇಳು’ ಪೋಸ್ಟರ್‌ಗೆ ಬೇರೆ ಬೇರೆ ರೂಪಗಳನ್ನು ನೀಡಲಾಗಿದೆ. ‘ಹೇ ದಲಿತ ಎದ್ದೇಳು’, ‘ಹೇ ಆದಿಮ ಎದ್ದೇಳು’ ಅವತರಣಿಕೆಗಳು ವೈರಲ್‌ ಆಗುತ್ತಿವೆ.

- Advertisement -
- Advertisement -

‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’ ಎಂದು ನಟ ಚೇತನ್‌ ಅಹಿಂಸಾ ಹೇಳಿಕೆ ನೀಡಿದ ಬಳಿಕ ಸುಳ್ಳು ಸುದ್ದಿಗಳಿಗೆ ಹೆಸರಾದ ಬಲಪಂಥೀಯ ಫೇಸ್‌ಬುಕ್‌ ಪೇಜ್‌ ‘ಪೋಸ್ಟ್‌ಕಾರ್ಡ್’ನಲ್ಲಿ ‘ಹೇ ಹಿಂದೂ ಎದ್ದೇಳು’ ಎಂಬ ಪೋಸ್ಟರ್‌ ಹಾಕಲಾಗಿದ್ದು, ಅದನ್ನು ನಾನಾ ರೂಪದಲ್ಲಿ ಜನರು ವ್ಯಂಗ್ಯ ಮಾಡಿದ್ದಾರೆ.

ಕಾಂತಾರ ಸಿನಿಮಾದ ಚಿತ್ರವನ್ನು ಈ ಪೋಸ್ಟರ್‌ನಲ್ಲಿ ಬಳಸಲಾಗಿದೆ. “ಹೇ ಹಿಂದೂ, ಎದ್ದೇಳು” ಎಂದು ದೊಡ್ಡ ಶೀರ್ಷಿಕೆಯನ್ನು ನೀಡಿ, “ನಿನ್ನತನಕ್ಕೆ ಧಕ್ಕೆಯಾದಾಗ ನೀ ಸುಮ್ಮನಿದ್ದರೆ ನಿನ್ನ ಅಂತ್ಯಕ್ಕೆ ನೀನೇ ಕಾರಣವಾದಂತೆ” ಎಂದು ಬರೆಯಲಾಗಿದೆ.

May be an image of one or more people and text that says "ಹೇ ಹಿಂದೂ, ಎದ್ದೇಳು POST CARD CARD ನಿನ್ನತನಕ್ಕೆ ಧಕ್ಕೆಯಾದಾಗ ನೀ ಸುಮ್ಮನಿದ್ದರೆ ನಿನ್ನ ಅಂತ್ಯಕ್ಕೆ ನೀನೇ ಕಾರಣವಾದಂತೆ"

ಹಿಂದೂ- ಮುಸ್ಲಿಂ ಸಮುದಾಯಗಳ ನಡುವೆ ಒಡಕುಗಳನ್ನು ಮೂಡಿಸಲು ಈ ರೀತಿಯ ಪೋಸ್ಟ್‌ಗಳನ್ನು ‘ಪೋಸ್ಟ್‌ಕಾರ್ಡ್’ ನಿರಂತರ ಮಾಡುತ್ತಿರುವುದನ್ನು ಗಮನಿಸುತ್ತಾ ಬಂದಿರುವ ಜನರು, ‘ಹೇ ಹಿಂದೂ ಎದ್ದೇಳು’ ಎಂಬ ಟ್ಯಾಗ್‌ಲೈನ್‌ನಲ್ಲಿಯೇ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ‘ಹೇ ಹಿಂದೂ ಎದ್ದೇಳು’ ಪೋಸ್ಟರ್‌ನ ವಿವಿಧ ಅವತರಣಿಕೆಗಳು ವೈರಲ್ ಆಗುತ್ತಿವೆ.

“ಹೇ ಹಿಂದೂ, ಎದ್ದೇಳು, ಪೆಟ್ರೋಲ್ ರೇಟು 105 ಆಗಿದೆ. ಗ್ಯಾಸ್ ಸಿಲಿಂಡರ್ 1100 ಆಗಿದೆ. ಡಾಲರ್ ಬೆಲೆ 83 ಆಗಿದೆ. ಎಲ್ಲಾ ಬೆಲೆ ಜಾಸ್ತಿ ಆಗ್ತಿದೆ. ಏಳು ಎದ್ದೇಳು, ಚುನಾವಣೆ ಬಂತು ಬಿಜೆಪಿಯನ್ನು ಸೋಲಿಸು” ಎಂಬ ಪೋಸ್ಟರ್‌ ಹರಿದಾಡಿದೆ.

ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಮತ್ತಷ್ಟು ಕುಸಿದಿರುವುದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದು ಸೇರಿದಂತೆ ಮೊದಲಾದ ಸಂಗತಿಗಳನ್ನು ಹೇ ಹಿಂದೂ ಎದ್ದೇಳು ಪೋಸ್ಟರ್‌ಗಳ ಮೂಲಕ ಮುನ್ನೆಲೆಗೆ ತರಲಾಗಿದೆ.

May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಮೋದಿ ಆಡಳಿತದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 83 ಆಗಿದೆ, ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಸಾರ್ವಜನಿಕ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ, ಹೀಗೇ ಬಿಟ್ಟರೆ ಭಾರತದ ಜನರು ಬೀದಿ ಪಾಲಾಗುತ್ತಾರೆ"May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಪೆಟ್ರೋಲ್-ಡೀಸೆಲ್, ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ... ನೀ ಸುಮ್ಮನೆ ಇದ್ದರೆ ನಿಮ್ಮನು ಮೋದಿ & ಗ್ಯಾಂಗ್ ಧರ್ಮದ ಹೆಸರಲ್ಲಿ ತಿರ್ಪೆ ಎತ್ತುವ ಹಾಗೆ ಮಾಡುತ್ತಾರೆ."May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಭಾರತದ ಜಾಗತಿಕ ಹಸಿವಿನ ಸೂಚ್ಯಂಕ ಪಾಕ್, ಬಾಂಗ್ಲಾದೇಶ, ಶ್ರೀಲಂಕಾಕ್ಕಿಂತ ಕಳಪೆಯಾಗಿ 107ನೇ ಸ್ಥಾನಕ್ಕೆಕುಸಿದಿದೆ, ಹೀಗೇ ಬಿಟ್ಟರೆ ಮೋದಿ ಮತ್ತವರ ಗ್ಯಾಂಗ್ ಭಾರತದ ಹೆಸರನ್ನು ವಿಶ್ವ ಭೂಪಟದಿಂದ ಕಿತ್ತು ಹಾಕುತ್ತದೆ"‘ಹಿಂದೂ ನಾವೆಲ್ಲ ಒಂದು’ ಎನ್ನುವ ಸಂಘಪರಿವಾರ ದಲಿತರ ಮೇಲೆ ದೌರ್ಜನ್ಯವಾದಾಗ ಮೌನ ತಾಳಿರುವುದನ್ನು ಈ ಅಭಿಯಾನದಲ್ಲಿ ಪ್ರಶ್ನಿಸಲಾಗಿದೆ.

“ಹೇ ಹಿಂದೂ ಎದ್ದೇಳು, ರಾಮನಗರದಲ್ಲಿ ಒಬ್ಬ ದಲಿತ ಬಾಲಕಿಯ ಮೇಲೆ ನಿವೃತ್ತ ಪೊಲೀಸ್ ಪೇದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೇ ಹಿಂದೂ ಎದ್ದೇಳು, ಸ್ವಾಮೀಜಿಯೊಬ್ಬರ ಮೇಲೆ ಅತ್ಯಾಚಾರದ ಆರೋಪ ಬಂದಿದೆ, ಧರ್ಮಸ್ಥಳದ ಬಳಿ ಬಜರಂಗದಳದ ಮುಖಂಡನೊಬ್ಬ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾನೆ. ಪೆದ್ದನಹಳ್ಳಿಯ ಇಬ್ಬರು ದಲಿತರ ಹೆಣ ರಾತ್ರೋರಾತ್ರಿ ಬಿದ್ದಿವೆ. ಹೇ ಹಿಂದೂ ಎದ್ದೇಳು, ಶಿಕ್ಷಕನೇ ದಲಿತ ಬಾಲಕನನ್ನು ಹೊಡೆದು ಕೊಂದಿದ್ದಾನೆ. ಹೇ ಹಿಂದೂ ಎದ್ದೇಳು, ಗುಬ್ಬಿಯಲ್ಲಿ ದೇವಸ್ಥಾನಕ್ಕೆ ಒಳಹೋದ ದಲಿತನಿಗೆ ಅರ್ಚಕ ಜಾತಿ ನಿಂದನೆ ಮಾಡಿದ್ದಾನೆ. ಹೇ ಹಿಂದೂ ಎದ್ದೇಳು, ದೇವರ ಕೋಲು ಮುಟ್ಟಿದ್ದಕ್ಕೆ ದಲಿತ ಕುಟುಂಬಕ್ಕೆ ಛೀಮಾರಿ ಹಾಕಿದ್ದಾರೆ. ಹೇ ಹಿಂದೂ ಎದ್ದೇಳು, ಚಿಕ್ಕಮಗಳೂರಲ್ಲಿ ಗರ್ಭಿಣಿ ದಲಿತ ಮಹಿಳೆಗೆ ಹೊಡೆದು ಜಗತ್ತನೇ ನೋಡದ ಮಗುವನ್ನೇ ಕೊಲ್ಲಲಾಗಿದೆ” ಎಂಬ ಸಾಲುಗಳು ವೈರಲ್ ಆಗುತ್ತಿವೆ.

“ಹೇ, ಹಿಂದೂ ಎದ್ದೇಳು. ಚುನಾವಣೆ ಹತ್ತಿರವಾಗುತ್ತಿದೆ” ಎಂದು ಟೀಕಿಸಲಾಗಿದೆ.

ಲೇಖಕ ರುದ್ರ ಪುನೀತ್‌ ಆರ್‌.ಸಿ. ಅವರು ಬರೆದಿರುವ ಪೋಸ್ಟ್‌ಅನ್ನು ಅನೇಕರು ಹಂಚಿಕೊಳ್ಳುತ್ತಿದ್ದಾರೆ. “ಏಳೋದೇನೋ ಏಳೋಣ, ಆದ್ರೆ ಯಾರ್ ಎಳ್ಬೇಕು ಅನ್ನೋದನ್ನ ಸ್ಪೆಸಿಫಿಕ್ ಆಗಿ ಹೇಳ್ಬೇಕಲ್ವಾ?” ಎಂದು ಪ್ರಶ್ನಿಸಿರುವ ಅವರು, “ಹೇ ಹಿಂದೂ ಎದ್ದೇಳು ಅಂದ್ರೆ, ಬ್ರಾಹ್ಮಣರು ಎಳ್ಬೇಕಾ ? ಕ್ಷತ್ರಿಯರು ಎಳ್ಬೇಕಾ? ವೈಶ್ಯರು ಎಳ್ಬೇಕಾ? ಲಿಂಗಾಯತರು? ಒಕ್ಕಲಿಗರು? ಗಾಣಿಗರು? ಕುಂಚಿಟಿಗರು? ಭಂಟರು? ಮೊಗವೀರರು? ಪೂಜಾರರು ಮಾದಿಗರು? ಹೊಲೆಯರು? ದಕ್ಕಲಿಗರು? ಲಂಬಾಣಿಗರು? ಭೋವಿಗಳು? ಕೊರಚ ಕೊರಮರು? ಅಲೆಮಾರಿಗಳು ಆದಿವಾಸಿಗಳು? ಹಂದಿಜೋಗಿ, ಮಾಂಗ್ ಗಾರುಡಿಗಳು? ಯಾರು ಏಳಬೇಕು” ಎಂದು ಕೇಳಿದ್ದಾರೆ.

“ನಾನು ಹಿಂದೂನೇ, ಎಲೆಕ್ಷನ್ ಬಂದಾಗ, ಯಾತ್ರೆ ಮೆರವಣಿಗೆ ರ್‍ಯಾಲಿ ನಡೆದಾಗ ಮಾತ್ರ. ಬಾಕಿ ಸಮಯದಲ್ಲಿ ನನ್ನನ್ನು ಒಂದು ಜಾತಿಗೆ ಕಟ್ಟಿಹಾಕಿ ಶೋಷಣೆ ಮಾಡ್ತಾರೆ. ನಾನೂ ಹಿಂದೂ ಅಂತೆ- ಆದರೆ ನಾನು ನನ್ನ ಮದುವೆಯಲ್ಲಿ ಕುದುರೆ ಏರಿದರೆ ನನ್ನನ್ನು ಹೊಡೆದು ಕೊಲ್ಲುತ್ತಾರೆ. ನಾನು ಹಿಂದೂ ಅಂತೆ- ಆದರೆ ಉಡುಪಿಯ ಕೋಟಾ ಬಳಿ ನನ್ನ ಮದುವೆಯಲ್ಲಿ ಡಿಜೆ ಹಾಕಿದ್ದಕ್ಕೆ ನನ್ನನ್ನು ಮದುಮಗ ಅಂತಲೂ ನೋಡದೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿ ಬೆತ್ತಲೆ ನಿಲ್ಲಿಸುತ್ತಾರೆ. ನಾನು ಹಿಂದೂ ಅಂತೆ- ಕೆಎಎಸ್‌ ಪರೀಕ್ಷೆ ಬರೆದು ಬಂದು ನನ್ನ ಹಳ್ಳಿಗೆ ಬಸ್ ಸಿಗಲಿಲ್ಲವೆಂದು ಹತ್ತಿರವಿದ್ದ ದೇವಸ್ಥಾನವೊಂದರಲ್ಲಿ ಮಲಗಿದ್ದಕ್ಕೆ ನನ್ನನ್ನ ಕತ್ತೆಮೇಲೆ ಮೆರವಣಿಗೆ ಮಾಡುತ್ತಾರೆ. ನಾನು ಹಿಂದೂ ಅಂತೆ- ಆದರೆ ನನ್ನ ತಂಗಿ ದಾನಮ್ಮನ ಅತ್ಯಾಚಾರವಾದಾಗ ನಮ್ಮ ನ್ಯಾಯಕ್ಕಾಗಿ ಯಾರೂ ಬರಲಿಲ್ಲ. ನಾನು ಹಿಂದೂ ಅಂತೆ- ನನ್ನ ಕೇರಿಗಳು, ತಾಂಡಾಗಳು, ಓಣಿಗಳು, ಹಟ್ಟಿಗಳು, ಡೇರೆಗಳು ಈಗಲೂ ಊರಾಚೆ ಇವೆ”- ಹೀಗೆ ಹಲವಾರು ನೋವುಗಳನ್ನು ಪುನೀತ್‌ ವ್ಯಕ್ತಪಡಿಸಿದ್ದಾರೆ.

‘ಹೇ ಹಿಂದೂ ಎದ್ದೇಳು’ ರೀತಿಯಲ್ಲಿ ‘ಹೇ ದಲಿತ ಎದ್ದೇಳು’ ಅವತರಣಿಕೆಯನ್ನು ‘ನಾನೊಬ್ಬ ದಲಿತ’ ಪೇಜ್‌ ಪೋಸ್ಟ್‌ ಮಾಡಿದೆ. ನೂರಾರು ಜನರು ಈ ಪೋಸ್ಟರ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ.

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು ಶಿಕ್ಷಕನೇ ದಲಿತ ಬಾಲಕನನ್ನು ಹೊಡೆದು ಕೊಂದಿದ್ದಾನೆ ಯೂಪಿಯಲ್ಲಿ..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ರಾಮನಗರದಲ್ಲಿ ಒಬ್ಬ ದಲಿತ ಬಾಲಕಿಯ ಮೇಲೆ ನಿವೃತ್ತ ಪೊಲೀಸ್ ಪೇದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಧರ್ಮಸ್ಥಳದ ಬಳಿ ಬಜರಂಗದಳದ ಮುಖಂಡನೊಬ್ಬ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾನೆ."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ದೇವರ ಎದ್ದೇಳು... ಕೋಲು ಮುಟ್ಟಿದ್ದಕ್ಕೆ ದಲಿತ ಕುಟುಂಬಕ್ಕೆ ಛೀಮಾರಿ ಹಾಕಿದ್ದರು..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಗುಬ್ಬಿಯಲ್ಲಿ ದೇವಸ್ಥಾನಕ್ಕೆ ಒಳಹೋದ ದಲಿತರಿಗೆ ಅರ್ಚಕ ಜಾತಿ ನಿಂದನೆ ಮಾಡಿದ್ದಾನೆ...."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಹೆಣ ರಾತ್ರೋರಾತ್ರಿ ಬಿದ್ದವು..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು ಚಿಕ್ಕಮಗಳೂರಲ್ಲಿ ಗರ್ಭಿಣಿ ದಲಿತ ಮಹಿಳೆಗೆ ಹೊಡೆದು ಜಗತ್ತನೇ ನೋಡದ ಕಂದಮ್ಮನನ್ನು ಕೊಂದಿದ್ದಾನೆ"

‘ನಾವು ಹೊಲೆಯರು- ಚಲವಾದೇರು’ ಪೇಜ್‌ನಲ್ಲಿ ‘ಎದ್ದೇಳು ಆದಿಮ’ ಅವತರಣಿಕೆಯನ್ನು ಪೋಸ್ಟ್‌ ಮಾಡಲಾಗಿದೆ.

“ಆರಂಬ ಮಾಡಿದ‌ ನಮ್ಮನು ಅಡಿಯಾಳಾಗಿಸಿಕೊಂಡಿದ್ದಾರೆ. ನಮ್ಮ ಮುಟ್ಟಿ ಮೈಲಿಗೆಯೆಂದು ಕೈ ತೊಳೆದುಕೊಂಡಿದ್ದಾರೆ. ನೆಡೆದ ದಾರಿಗೆ ಪಂಚಗವ್ಯ ಚೆಲ್ಲಿ ಶುಚಿಗೊಳಿಸಿದ್ದಾರೆ. ನಾವೆಲ್ಲ ಒಂದೇ ಎಂದು ತಲೆಸವರಿ, ನಮ್ಮ ಮೇಲಾದ ದೌರ್ಜನ್ಯಗಳ ಕಂಡು ಕಾಣದಂತೆ ಸುಮ್ಮನಿದ್ದಾರೆ. ನಮ್ಮ ಹೊಲತಿ ಮಾದಿಗಿತ್ತಿ ಕೊರತಿ ಪಾಣರತಿ ಊರದೇವರ ಮಾರಿದೇವರ ಬಿಸಿಲವ್ವ ಬೆಳ್ಳಿಪಣದವ್ವರನ್ನೆಲ್ಲಾ ಲಲಿತಾ ಗಾಯಿತ್ರಿ ಶಾಖಾಂಬರಿ ಶ್ವೇತಾವರಾಹಿಯಾಗಿಸಿಕೊಂಡಿದ್ದಾರೆ. ನಮ್ಮ ವಾಸ್ತವ್ಯದ ತೆಂಕಣ ದಿಕ್ಕನ್ನು ಕೆಟ್ಟ ದಿಕ್ಕೆಂದಿದ್ದಾರೆ. ಹೊಲಯ ಮಾದಿಗ ಕೊರಗ ಪಾಣ ಪಂಬದ ನಲಿಕೆ ಪರವರ ಹೆಸರಿನರ್ಥಗಳಗೆಡಿಸಿ ಆ ಹೆಸರುಗನ್ನ ಬಳಸಲು ಕೀಳರಿಮೆಗೆ ಬೀಳುವಂತ ಸ್ಥಿತಿ ನಿರ್ಮಿಸಿದ್ದಾರೆ. ನಮ್ಮ ಶೋಷಣೆಯ ಇತಿಹಾಸದೊಳಗೆ ನಮ್ಮ ವೈಭವದ ಇತಿಹಾಸವನ್ನು ಕರಗಿಸಿ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ. ನಮ್ಮ ಊರದ್ಯಾವ್ರು ಮಾರಿದ್ಯಾವ್ರು ಭೂತಗಳ ಕ್ಷುದ್ರದೈವಗಳೆಂದು ಜರಿದಿದ್ದಾರೆ. ನಮ್ಮ ಇತಿಹಾಸವ ತಿದ್ದಿ ವಿರೂಪಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ. ಏಳೋ ಆದಿಮ, ಎದ್ದೇಳು…” ಎಂದು ಪೋಸ್ಟ್‌ ಮಾಡಲಾಗಿದೆ.

ವಿವಿಧ ರೀತಿಯ ಪೋಸ್ಟರ್‌ಗಳು ವೈರಲ್ ಆಗುತ್ತಿದ್ದಂತೆ ಪೋಸ್ಟ್‌ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಮತ್ತೊಂದು ಪೋಸ್ಟರ್‌ ಹಾಕಿ ಸ್ಪಷ್ಟನೆ ನೀಡಿದ್ದಾರೆ. “ಮನಸೋ ಇಚ್ಛೆ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....