Homeಕರ್ನಾಟಕಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

ಹೇ ಹಿಂದೂ ಎದ್ದೇಳು: ಪೋಸ್ಟ್‌ ಕಾರ್ಡ್ ಪೋಸ್ಟರ್‌ಗೆ ನಾನಾ ರೂಪ!

‘ಹೇ ಹಿಂದೂ ಎದ್ದೇಳು’ ಪೋಸ್ಟರ್‌ಗೆ ಬೇರೆ ಬೇರೆ ರೂಪಗಳನ್ನು ನೀಡಲಾಗಿದೆ. ‘ಹೇ ದಲಿತ ಎದ್ದೇಳು’, ‘ಹೇ ಆದಿಮ ಎದ್ದೇಳು’ ಅವತರಣಿಕೆಗಳು ವೈರಲ್‌ ಆಗುತ್ತಿವೆ.

- Advertisement -
- Advertisement -

‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’ ಎಂದು ನಟ ಚೇತನ್‌ ಅಹಿಂಸಾ ಹೇಳಿಕೆ ನೀಡಿದ ಬಳಿಕ ಸುಳ್ಳು ಸುದ್ದಿಗಳಿಗೆ ಹೆಸರಾದ ಬಲಪಂಥೀಯ ಫೇಸ್‌ಬುಕ್‌ ಪೇಜ್‌ ‘ಪೋಸ್ಟ್‌ಕಾರ್ಡ್’ನಲ್ಲಿ ‘ಹೇ ಹಿಂದೂ ಎದ್ದೇಳು’ ಎಂಬ ಪೋಸ್ಟರ್‌ ಹಾಕಲಾಗಿದ್ದು, ಅದನ್ನು ನಾನಾ ರೂಪದಲ್ಲಿ ಜನರು ವ್ಯಂಗ್ಯ ಮಾಡಿದ್ದಾರೆ.

ಕಾಂತಾರ ಸಿನಿಮಾದ ಚಿತ್ರವನ್ನು ಈ ಪೋಸ್ಟರ್‌ನಲ್ಲಿ ಬಳಸಲಾಗಿದೆ. “ಹೇ ಹಿಂದೂ, ಎದ್ದೇಳು” ಎಂದು ದೊಡ್ಡ ಶೀರ್ಷಿಕೆಯನ್ನು ನೀಡಿ, “ನಿನ್ನತನಕ್ಕೆ ಧಕ್ಕೆಯಾದಾಗ ನೀ ಸುಮ್ಮನಿದ್ದರೆ ನಿನ್ನ ಅಂತ್ಯಕ್ಕೆ ನೀನೇ ಕಾರಣವಾದಂತೆ” ಎಂದು ಬರೆಯಲಾಗಿದೆ.

May be an image of one or more people and text that says "ಹೇ ಹಿಂದೂ, ಎದ್ದೇಳು POST CARD CARD ನಿನ್ನತನಕ್ಕೆ ಧಕ್ಕೆಯಾದಾಗ ನೀ ಸುಮ್ಮನಿದ್ದರೆ ನಿನ್ನ ಅಂತ್ಯಕ್ಕೆ ನೀನೇ ಕಾರಣವಾದಂತೆ"

ಹಿಂದೂ- ಮುಸ್ಲಿಂ ಸಮುದಾಯಗಳ ನಡುವೆ ಒಡಕುಗಳನ್ನು ಮೂಡಿಸಲು ಈ ರೀತಿಯ ಪೋಸ್ಟ್‌ಗಳನ್ನು ‘ಪೋಸ್ಟ್‌ಕಾರ್ಡ್’ ನಿರಂತರ ಮಾಡುತ್ತಿರುವುದನ್ನು ಗಮನಿಸುತ್ತಾ ಬಂದಿರುವ ಜನರು, ‘ಹೇ ಹಿಂದೂ ಎದ್ದೇಳು’ ಎಂಬ ಟ್ಯಾಗ್‌ಲೈನ್‌ನಲ್ಲಿಯೇ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ‘ಹೇ ಹಿಂದೂ ಎದ್ದೇಳು’ ಪೋಸ್ಟರ್‌ನ ವಿವಿಧ ಅವತರಣಿಕೆಗಳು ವೈರಲ್ ಆಗುತ್ತಿವೆ.

“ಹೇ ಹಿಂದೂ, ಎದ್ದೇಳು, ಪೆಟ್ರೋಲ್ ರೇಟು 105 ಆಗಿದೆ. ಗ್ಯಾಸ್ ಸಿಲಿಂಡರ್ 1100 ಆಗಿದೆ. ಡಾಲರ್ ಬೆಲೆ 83 ಆಗಿದೆ. ಎಲ್ಲಾ ಬೆಲೆ ಜಾಸ್ತಿ ಆಗ್ತಿದೆ. ಏಳು ಎದ್ದೇಳು, ಚುನಾವಣೆ ಬಂತು ಬಿಜೆಪಿಯನ್ನು ಸೋಲಿಸು” ಎಂಬ ಪೋಸ್ಟರ್‌ ಹರಿದಾಡಿದೆ.

ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಮತ್ತಷ್ಟು ಕುಸಿದಿರುವುದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದು ಸೇರಿದಂತೆ ಮೊದಲಾದ ಸಂಗತಿಗಳನ್ನು ಹೇ ಹಿಂದೂ ಎದ್ದೇಳು ಪೋಸ್ಟರ್‌ಗಳ ಮೂಲಕ ಮುನ್ನೆಲೆಗೆ ತರಲಾಗಿದೆ.

May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಮೋದಿ ಆಡಳಿತದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 83 ಆಗಿದೆ, ನಿರುದ್ಯೋಗ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಸಾರ್ವಜನಿಕ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ, ಹೀಗೇ ಬಿಟ್ಟರೆ ಭಾರತದ ಜನರು ಬೀದಿ ಪಾಲಾಗುತ್ತಾರೆ"May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಪೆಟ್ರೋಲ್-ಡೀಸೆಲ್, ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ... ನೀ ಸುಮ್ಮನೆ ಇದ್ದರೆ ನಿಮ್ಮನು ಮೋದಿ & ಗ್ಯಾಂಗ್ ಧರ್ಮದ ಹೆಸರಲ್ಲಿ ತಿರ್ಪೆ ಎತ್ತುವ ಹಾಗೆ ಮಾಡುತ್ತಾರೆ."May be an image of one or more people and text that says "ಹೇ ಹಿಂದೂ ಎದ್ದೇಳು! POST CARD ಭಾರತದ ಜಾಗತಿಕ ಹಸಿವಿನ ಸೂಚ್ಯಂಕ ಪಾಕ್, ಬಾಂಗ್ಲಾದೇಶ, ಶ್ರೀಲಂಕಾಕ್ಕಿಂತ ಕಳಪೆಯಾಗಿ 107ನೇ ಸ್ಥಾನಕ್ಕೆಕುಸಿದಿದೆ, ಹೀಗೇ ಬಿಟ್ಟರೆ ಮೋದಿ ಮತ್ತವರ ಗ್ಯಾಂಗ್ ಭಾರತದ ಹೆಸರನ್ನು ವಿಶ್ವ ಭೂಪಟದಿಂದ ಕಿತ್ತು ಹಾಕುತ್ತದೆ"‘ಹಿಂದೂ ನಾವೆಲ್ಲ ಒಂದು’ ಎನ್ನುವ ಸಂಘಪರಿವಾರ ದಲಿತರ ಮೇಲೆ ದೌರ್ಜನ್ಯವಾದಾಗ ಮೌನ ತಾಳಿರುವುದನ್ನು ಈ ಅಭಿಯಾನದಲ್ಲಿ ಪ್ರಶ್ನಿಸಲಾಗಿದೆ.

“ಹೇ ಹಿಂದೂ ಎದ್ದೇಳು, ರಾಮನಗರದಲ್ಲಿ ಒಬ್ಬ ದಲಿತ ಬಾಲಕಿಯ ಮೇಲೆ ನಿವೃತ್ತ ಪೊಲೀಸ್ ಪೇದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೇ ಹಿಂದೂ ಎದ್ದೇಳು, ಸ್ವಾಮೀಜಿಯೊಬ್ಬರ ಮೇಲೆ ಅತ್ಯಾಚಾರದ ಆರೋಪ ಬಂದಿದೆ, ಧರ್ಮಸ್ಥಳದ ಬಳಿ ಬಜರಂಗದಳದ ಮುಖಂಡನೊಬ್ಬ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾನೆ. ಪೆದ್ದನಹಳ್ಳಿಯ ಇಬ್ಬರು ದಲಿತರ ಹೆಣ ರಾತ್ರೋರಾತ್ರಿ ಬಿದ್ದಿವೆ. ಹೇ ಹಿಂದೂ ಎದ್ದೇಳು, ಶಿಕ್ಷಕನೇ ದಲಿತ ಬಾಲಕನನ್ನು ಹೊಡೆದು ಕೊಂದಿದ್ದಾನೆ. ಹೇ ಹಿಂದೂ ಎದ್ದೇಳು, ಗುಬ್ಬಿಯಲ್ಲಿ ದೇವಸ್ಥಾನಕ್ಕೆ ಒಳಹೋದ ದಲಿತನಿಗೆ ಅರ್ಚಕ ಜಾತಿ ನಿಂದನೆ ಮಾಡಿದ್ದಾನೆ. ಹೇ ಹಿಂದೂ ಎದ್ದೇಳು, ದೇವರ ಕೋಲು ಮುಟ್ಟಿದ್ದಕ್ಕೆ ದಲಿತ ಕುಟುಂಬಕ್ಕೆ ಛೀಮಾರಿ ಹಾಕಿದ್ದಾರೆ. ಹೇ ಹಿಂದೂ ಎದ್ದೇಳು, ಚಿಕ್ಕಮಗಳೂರಲ್ಲಿ ಗರ್ಭಿಣಿ ದಲಿತ ಮಹಿಳೆಗೆ ಹೊಡೆದು ಜಗತ್ತನೇ ನೋಡದ ಮಗುವನ್ನೇ ಕೊಲ್ಲಲಾಗಿದೆ” ಎಂಬ ಸಾಲುಗಳು ವೈರಲ್ ಆಗುತ್ತಿವೆ.

“ಹೇ, ಹಿಂದೂ ಎದ್ದೇಳು. ಚುನಾವಣೆ ಹತ್ತಿರವಾಗುತ್ತಿದೆ” ಎಂದು ಟೀಕಿಸಲಾಗಿದೆ.

ಲೇಖಕ ರುದ್ರ ಪುನೀತ್‌ ಆರ್‌.ಸಿ. ಅವರು ಬರೆದಿರುವ ಪೋಸ್ಟ್‌ಅನ್ನು ಅನೇಕರು ಹಂಚಿಕೊಳ್ಳುತ್ತಿದ್ದಾರೆ. “ಏಳೋದೇನೋ ಏಳೋಣ, ಆದ್ರೆ ಯಾರ್ ಎಳ್ಬೇಕು ಅನ್ನೋದನ್ನ ಸ್ಪೆಸಿಫಿಕ್ ಆಗಿ ಹೇಳ್ಬೇಕಲ್ವಾ?” ಎಂದು ಪ್ರಶ್ನಿಸಿರುವ ಅವರು, “ಹೇ ಹಿಂದೂ ಎದ್ದೇಳು ಅಂದ್ರೆ, ಬ್ರಾಹ್ಮಣರು ಎಳ್ಬೇಕಾ ? ಕ್ಷತ್ರಿಯರು ಎಳ್ಬೇಕಾ? ವೈಶ್ಯರು ಎಳ್ಬೇಕಾ? ಲಿಂಗಾಯತರು? ಒಕ್ಕಲಿಗರು? ಗಾಣಿಗರು? ಕುಂಚಿಟಿಗರು? ಭಂಟರು? ಮೊಗವೀರರು? ಪೂಜಾರರು ಮಾದಿಗರು? ಹೊಲೆಯರು? ದಕ್ಕಲಿಗರು? ಲಂಬಾಣಿಗರು? ಭೋವಿಗಳು? ಕೊರಚ ಕೊರಮರು? ಅಲೆಮಾರಿಗಳು ಆದಿವಾಸಿಗಳು? ಹಂದಿಜೋಗಿ, ಮಾಂಗ್ ಗಾರುಡಿಗಳು? ಯಾರು ಏಳಬೇಕು” ಎಂದು ಕೇಳಿದ್ದಾರೆ.

“ನಾನು ಹಿಂದೂನೇ, ಎಲೆಕ್ಷನ್ ಬಂದಾಗ, ಯಾತ್ರೆ ಮೆರವಣಿಗೆ ರ್‍ಯಾಲಿ ನಡೆದಾಗ ಮಾತ್ರ. ಬಾಕಿ ಸಮಯದಲ್ಲಿ ನನ್ನನ್ನು ಒಂದು ಜಾತಿಗೆ ಕಟ್ಟಿಹಾಕಿ ಶೋಷಣೆ ಮಾಡ್ತಾರೆ. ನಾನೂ ಹಿಂದೂ ಅಂತೆ- ಆದರೆ ನಾನು ನನ್ನ ಮದುವೆಯಲ್ಲಿ ಕುದುರೆ ಏರಿದರೆ ನನ್ನನ್ನು ಹೊಡೆದು ಕೊಲ್ಲುತ್ತಾರೆ. ನಾನು ಹಿಂದೂ ಅಂತೆ- ಆದರೆ ಉಡುಪಿಯ ಕೋಟಾ ಬಳಿ ನನ್ನ ಮದುವೆಯಲ್ಲಿ ಡಿಜೆ ಹಾಕಿದ್ದಕ್ಕೆ ನನ್ನನ್ನು ಮದುಮಗ ಅಂತಲೂ ನೋಡದೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿ ಬೆತ್ತಲೆ ನಿಲ್ಲಿಸುತ್ತಾರೆ. ನಾನು ಹಿಂದೂ ಅಂತೆ- ಕೆಎಎಸ್‌ ಪರೀಕ್ಷೆ ಬರೆದು ಬಂದು ನನ್ನ ಹಳ್ಳಿಗೆ ಬಸ್ ಸಿಗಲಿಲ್ಲವೆಂದು ಹತ್ತಿರವಿದ್ದ ದೇವಸ್ಥಾನವೊಂದರಲ್ಲಿ ಮಲಗಿದ್ದಕ್ಕೆ ನನ್ನನ್ನ ಕತ್ತೆಮೇಲೆ ಮೆರವಣಿಗೆ ಮಾಡುತ್ತಾರೆ. ನಾನು ಹಿಂದೂ ಅಂತೆ- ಆದರೆ ನನ್ನ ತಂಗಿ ದಾನಮ್ಮನ ಅತ್ಯಾಚಾರವಾದಾಗ ನಮ್ಮ ನ್ಯಾಯಕ್ಕಾಗಿ ಯಾರೂ ಬರಲಿಲ್ಲ. ನಾನು ಹಿಂದೂ ಅಂತೆ- ನನ್ನ ಕೇರಿಗಳು, ತಾಂಡಾಗಳು, ಓಣಿಗಳು, ಹಟ್ಟಿಗಳು, ಡೇರೆಗಳು ಈಗಲೂ ಊರಾಚೆ ಇವೆ”- ಹೀಗೆ ಹಲವಾರು ನೋವುಗಳನ್ನು ಪುನೀತ್‌ ವ್ಯಕ್ತಪಡಿಸಿದ್ದಾರೆ.

‘ಹೇ ಹಿಂದೂ ಎದ್ದೇಳು’ ರೀತಿಯಲ್ಲಿ ‘ಹೇ ದಲಿತ ಎದ್ದೇಳು’ ಅವತರಣಿಕೆಯನ್ನು ‘ನಾನೊಬ್ಬ ದಲಿತ’ ಪೇಜ್‌ ಪೋಸ್ಟ್‌ ಮಾಡಿದೆ. ನೂರಾರು ಜನರು ಈ ಪೋಸ್ಟರ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ.

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು ಶಿಕ್ಷಕನೇ ದಲಿತ ಬಾಲಕನನ್ನು ಹೊಡೆದು ಕೊಂದಿದ್ದಾನೆ ಯೂಪಿಯಲ್ಲಿ..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ರಾಮನಗರದಲ್ಲಿ ಒಬ್ಬ ದಲಿತ ಬಾಲಕಿಯ ಮೇಲೆ ನಿವೃತ್ತ ಪೊಲೀಸ್ ಪೇದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಧರ್ಮಸ್ಥಳದ ಬಳಿ ಬಜರಂಗದಳದ ಮುಖಂಡನೊಬ್ಬ ದಲಿತ ವ್ಯಕ್ತಿಯನ್ನು ಹೊಡೆದು ಕೊಂದಿದ್ದಾನೆ."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ದೇವರ ಎದ್ದೇಳು... ಕೋಲು ಮುಟ್ಟಿದ್ದಕ್ಕೆ ದಲಿತ ಕುಟುಂಬಕ್ಕೆ ಛೀಮಾರಿ ಹಾಕಿದ್ದರು..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಗುಬ್ಬಿಯಲ್ಲಿ ದೇವಸ್ಥಾನಕ್ಕೆ ಒಳಹೋದ ದಲಿತರಿಗೆ ಅರ್ಚಕ ಜಾತಿ ನಿಂದನೆ ಮಾಡಿದ್ದಾನೆ...."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು... ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಹೆಣ ರಾತ್ರೋರಾತ್ರಿ ಬಿದ್ದವು..."

May be an image of one or more people and text that says "ಹೇ ದಲಿತ ಎದ್ದೇಳು ಹೇ ದಲಿತ ಎದ್ದೇಳು ಚಿಕ್ಕಮಗಳೂರಲ್ಲಿ ಗರ್ಭಿಣಿ ದಲಿತ ಮಹಿಳೆಗೆ ಹೊಡೆದು ಜಗತ್ತನೇ ನೋಡದ ಕಂದಮ್ಮನನ್ನು ಕೊಂದಿದ್ದಾನೆ"

‘ನಾವು ಹೊಲೆಯರು- ಚಲವಾದೇರು’ ಪೇಜ್‌ನಲ್ಲಿ ‘ಎದ್ದೇಳು ಆದಿಮ’ ಅವತರಣಿಕೆಯನ್ನು ಪೋಸ್ಟ್‌ ಮಾಡಲಾಗಿದೆ.

“ಆರಂಬ ಮಾಡಿದ‌ ನಮ್ಮನು ಅಡಿಯಾಳಾಗಿಸಿಕೊಂಡಿದ್ದಾರೆ. ನಮ್ಮ ಮುಟ್ಟಿ ಮೈಲಿಗೆಯೆಂದು ಕೈ ತೊಳೆದುಕೊಂಡಿದ್ದಾರೆ. ನೆಡೆದ ದಾರಿಗೆ ಪಂಚಗವ್ಯ ಚೆಲ್ಲಿ ಶುಚಿಗೊಳಿಸಿದ್ದಾರೆ. ನಾವೆಲ್ಲ ಒಂದೇ ಎಂದು ತಲೆಸವರಿ, ನಮ್ಮ ಮೇಲಾದ ದೌರ್ಜನ್ಯಗಳ ಕಂಡು ಕಾಣದಂತೆ ಸುಮ್ಮನಿದ್ದಾರೆ. ನಮ್ಮ ಹೊಲತಿ ಮಾದಿಗಿತ್ತಿ ಕೊರತಿ ಪಾಣರತಿ ಊರದೇವರ ಮಾರಿದೇವರ ಬಿಸಿಲವ್ವ ಬೆಳ್ಳಿಪಣದವ್ವರನ್ನೆಲ್ಲಾ ಲಲಿತಾ ಗಾಯಿತ್ರಿ ಶಾಖಾಂಬರಿ ಶ್ವೇತಾವರಾಹಿಯಾಗಿಸಿಕೊಂಡಿದ್ದಾರೆ. ನಮ್ಮ ವಾಸ್ತವ್ಯದ ತೆಂಕಣ ದಿಕ್ಕನ್ನು ಕೆಟ್ಟ ದಿಕ್ಕೆಂದಿದ್ದಾರೆ. ಹೊಲಯ ಮಾದಿಗ ಕೊರಗ ಪಾಣ ಪಂಬದ ನಲಿಕೆ ಪರವರ ಹೆಸರಿನರ್ಥಗಳಗೆಡಿಸಿ ಆ ಹೆಸರುಗನ್ನ ಬಳಸಲು ಕೀಳರಿಮೆಗೆ ಬೀಳುವಂತ ಸ್ಥಿತಿ ನಿರ್ಮಿಸಿದ್ದಾರೆ. ನಮ್ಮ ಶೋಷಣೆಯ ಇತಿಹಾಸದೊಳಗೆ ನಮ್ಮ ವೈಭವದ ಇತಿಹಾಸವನ್ನು ಕರಗಿಸಿ ರಾಜಕೀಯ ದಾಳವಾಗಿಸಿಕೊಂಡಿದ್ದಾರೆ. ನಮ್ಮ ಊರದ್ಯಾವ್ರು ಮಾರಿದ್ಯಾವ್ರು ಭೂತಗಳ ಕ್ಷುದ್ರದೈವಗಳೆಂದು ಜರಿದಿದ್ದಾರೆ. ನಮ್ಮ ಇತಿಹಾಸವ ತಿದ್ದಿ ವಿರೂಪಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ. ಏಳೋ ಆದಿಮ, ಎದ್ದೇಳು…” ಎಂದು ಪೋಸ್ಟ್‌ ಮಾಡಲಾಗಿದೆ.

ವಿವಿಧ ರೀತಿಯ ಪೋಸ್ಟರ್‌ಗಳು ವೈರಲ್ ಆಗುತ್ತಿದ್ದಂತೆ ಪೋಸ್ಟ್‌ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಮತ್ತೊಂದು ಪೋಸ್ಟರ್‌ ಹಾಕಿ ಸ್ಪಷ್ಟನೆ ನೀಡಿದ್ದಾರೆ. “ಮನಸೋ ಇಚ್ಛೆ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...