Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ.

ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್ ರಾಜಧಾನಿ ಬೈರುತ್ ಮೇಲೆ ಭೀಕರ ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ವರದಿಯಾಗಿದೆ.

ಸುಮಾರು ಒಂದು ವರ್ಷದ ಶಾಂತಿಯ ನಂತರ, ಹಿಝ್ಬುಲ್ಲಾ ಗುಂಪು ಸೋಮವಾರ ಬೆಳಿಗ್ಗೆ ಇಸ್ರೇಲ್ ಮೇಲೆ ದಾಳಿ ನಡೆಸುವ ಮೂಲಕ ಯುದ್ಧ ರಂಗಕ್ಕೆ ಮತ್ತೆ ಮರಳಿದೆ. ಹಿಝ್ಬುಲ್ಲಾ ಇಸ್ರೇಲ್‌ನ ಹೈಫಾ ಸಮೀಪವಿರುವ ಕ್ಷಿಪಣಿ ರಕ್ಷಣಾ ಕೇಂದ್ರವನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ.

ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿ ನಡೆಸಿ ಇರಾನ್‌ ಪರಮೋಚ್ಚ ನಾಯಕ ಅಯಾತುಲ್ಲಾ ಅಲೀ ಖಮೇನಿ ಅವರನ್ನು ಹತ್ಯೆ ಮಾಡಿರುವುದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ದಾಳಿ ಮಾಡಿದ್ದೇವೆ ಎಂದು ಹಿಝ್ಬುಲ್ಲಾ ಹೇಳಿಕೊಂಡಿದೆ.

ಹಿಜ್ಬುಲ್ಲಾದ ದಾಳಿಗೆ ಪ್ರತಿಯಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಬೈರುತ್ ಮೇಲೆ ಭಾರೀ ದಾಳಿ ನಡೆಸಿವೆ.ಬೈರುತ್‌ನ ದಕ್ಷಿಣ ಉಪನಗರವಾದ ದಹಿಯೆಹ್ ಪ್ರದೇಶವನ್ನು ಇಸ್ರೇಲ್ ಗುರಿಯಾಗಿಸಿಕೊಂಡಿದೆ. ಇದು ಹಿಝ್ಬುಲ್ಲಾದ ಪ್ರಬಲ ನೆಲೆಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಹಿಝ್ಬುಲ್ಲಾದ ಕೆಲವು ಹಿರಿಯ ನಾಯಕರನ್ನು ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಹಿಝ್ಬುಲ್ಲಾ ಮೇಲಿನ ದಾಳಿ ಇನ್ನಷ್ಟು ತೀವ್ರಗೊಳಿಸುವ ಸೂಚನೆ ಕೊಟ್ಟಿರುವ ಇಸ್ರೇಲ್, ದಕ್ಷಿಣ ಲೆಬನಾನ್‌ನ ಸುಮಾರು 50 ಹಳ್ಳಿಗಳ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದೆ.

ಹಿಝ್ಬುಲ್ಲಾ ದಾಳಿ ಖಂಡಿಸಿದ ಲೆಬನಾನ್ ಸರ್ಕಾರ

ಲೆಬನಾನ್‌ ಪ್ರಧಾನ ಮಂತ್ರಿ ನವಾಫ್ ಸಲಾಮ್ ಅವರು ಹಿಝ್ಬುಲ್ಲಾದ ಕ್ರಮವನ್ನು ಖಂಡಿಸಿದ್ದಾರೆ. ಹಿಝ್ಬುಲ್ಲಾ ನಡೆ ‘ಬೇಜವಾಬ್ದಾರಿತನದಿಂದ ಕೂಡಿದೆ’ ಮತ್ತು ಇದು ಇಸ್ರೇಲ್‌ಗೆ ದಾಳಿ ಮಾಡಲು ನೆಪ ಮಾಡಿಕೊಟ್ಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೆಬನಾನ್ ಮತ್ತೊಂದು ದೊಡ್ಡ ಯುದ್ಧವನ್ನು ಭರಿಸುವ ಸ್ಥಿತಿಯಲ್ಲಿಲ್ಲ ಎಂದು ಅವರು ಹೇಳಿದ್ದಾರೆ.

ವರದಿಗಳ ಪ್ರಕಾರ, ಇಸ್ರೇಲ್ ಮತ್ತು ಹಿಝ್ಬುಲ್ಲಾ ನಡುವೆ ದಾಳಿ-ಪ್ರತಿದಾಳಿ ಪ್ರಾರಂಭಗೊಂಡ ಬಳಿಕ, ಬೈರುತ್ ನಗರದಾದ್ಯಂತ ದಟ್ಟವಾದ ಹೊಗೆ ಆವರಿಸಿದೆ. ಜನರು ಭಯದಿಂದ ಸುರಕ್ಷಿತ ಪ್ರದೇಶಗಳತ್ತ ಧಾವಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....