Homeಮುಖಪುಟಬ್ರಾಹ್ಮಣ ಸಮುದಾಯದ ನಿಂದನೆ ಆರೋಪ; ಛತ್ತೀಸ್‌ಘಡದ ಸಿಎಂ ಭೂಪೇಶ್ ತಂದೆ ಜೈಲಿಗೆ

ಬ್ರಾಹ್ಮಣ ಸಮುದಾಯದ ನಿಂದನೆ ಆರೋಪ; ಛತ್ತೀಸ್‌ಘಡದ ಸಿಎಂ ಭೂಪೇಶ್ ತಂದೆ ಜೈಲಿಗೆ

ನನ್ನ ಸರ್ಕಾರದಲ್ಲಿ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಮುಖ್ಯಮಂತ್ರಿಯವರ ತಂದೆಯಾದರೇನು? ವಿವಿಧ ಸಮುದಾಯಗಳ ನಡುವೆ ಸಾಮರಸ್ಯ ಕಾಪಾಡುವುದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ- ಭೂಪೇಶ್ ಬಾಗೇಲ್

- Advertisement -
- Advertisement -

ಬ್ರಾಹ್ಮಣ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿದ ಆರೋಪದ ಮೇಲೆ ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಬಾಗೇಲ್‌ ಅವರ ತಂದೆ ನಂದಕುಮಾರ್ ಬಾಗೇಲ್‌ ಅವರನ್ನು ಜೈಲಿಗೆ ಹಾಕಲಾಗಿದ್ದು, ಅವರನ್ನು 15 ದಿನಗಳ ಕಾಲ ಸೆರೆಮನೆಯಲ್ಲಿಡಲು ರಾಯಪುರ ನ್ಯಾಯಾಲಯ ಸೂಚಿಸಿದೆ.

ತಂದೆಯ ಬಂಧನದ ಬಳಿಕ ಪ್ರತಿಕ್ರಿಯಿಸಿರುವ ಭೂಪೇಶ್, “ನನ್ನ ಸರ್ಕಾರದಲ್ಲಿ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಮುಖ್ಯಮಂತ್ರಿಯವರ ತಂದೆಯಾದರೇನು? ವಿವಿಧ ಸಮುದಾಯಗಳ ನಡುವೆ ಸಾಮರಸ್ಯ ಕಾಪಾಡುವುದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ. ಅವರು ಒಂದು ಸಮುದಾಯದ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಕ್ಷಮೆಯಾಚಿಸುವೆ. ಆದರೆ ಮುಖ್ಯಮಂತ್ರಿಯಾಗಿ ಕಾನೂನು ಕ್ರಮ ಜರುಗಿಸುವೆ” ಎಂದಿದ್ದಾರೆ.

ಛತ್ತೀಸ್ ಘಡದ ಮುಖ್ಯಮಂತ್ರಿ ಭೂಪೇಶ್ ಬಾಗೇಲ್‌

“ನನ್ನ ತಂದೆಯೊಂದಿಗಿನ ನನ್ನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಎಲ್ಲರೂ ಬಲ್ಲರು. ನಮ್ಮ ರಾಜಕೀಯ ವಿಚಾರಗಳು, ನಂಬಿಕೆಗಳ ನಡುವೆ ವ್ಯತ್ಯಾಸಗಳಿವೆ. ಅವರ ಮಗನಾಗಿ ಅವರಿಗೆ ಗೌರವ ನೀಡುತ್ತೇನೆ. ಆದರೆ ಸಮಾಜದಲ್ಲಿ ಸಾಮರಸ್ಯ ಕದಡುವ ಅವರ ನಡೆಗಳನ್ನು ಮುಖ್ಯಮಂತ್ರಿಯಾಗಿ ಯಾವುದೇ ಕಾರಣಕ್ಕೂ ಮನ್ನಿಸುವುದಿಲ್ಲ. ಛತ್ತೀಸ್‌ಘಡ ಸರ್ಕಾರ ಎಲ್ಲ ಧರ್ಮ, ಜಾತಿ, ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತದೆ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ” ಎಂದಿದ್ದಾರೆ.

ನಂದಕುಮಾರ್ ಬಾಗೇಲ್‌ ಅವರು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದಾಗ, ಬ್ರಾಹ್ಮಣ ಸಮುದಾಯವನ್ನು ಬಹಿಷ್ಕರಿಸುವಂತೆ ಹೇಳಿಕೆ ನೀಡಿದ್ದರು. ಅಲ್ಲದೇ ಬ್ರಾಹ್ಮಣರನ್ನು ವಿದೇಶಿಯರೆಂದು ವಿಶ್ಲೇಷಿಸಿ, ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಂತೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...