Homeಕರ್ನಾಟಕಬೆಂಗಳೂರು ಕಂಬಳದ ವಿರುದ್ಧ ಪಿಐಎಲ್‌ : ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು ಕಂಬಳದ ವಿರುದ್ಧ ಪಿಐಎಲ್‌ : ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ಮತ್ತು 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲುಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಇಂದು ದೆಹಲಿಯಲ್ಲಿದ್ದಾರೆ. ಪ್ರಕರಣದಲ್ಲಿ ಸಾಕಷ್ಟು ಕಾನೂನಿನ ಅಂಶಗಳಿದ್ದು, ಈ ಕುರಿತು ಸರ್ಕಾರದಿಂದ ಸೂಚನೆ ಪಡೆದು ಅವರು ವಾದ ಮಂಡಿಸಲಿದ್ದಾರೆ. ಹೀಗಾಗಿ, ಅರ್ಜಿಯ ವಿಚಾರಣೆಯನ್ನು ನಾಳೆ ಅಥವಾ ನಾಡಿದ್ದಿಗೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ವಕೀಲೆ ನಿಲೋಫರ್‌ ಅಕ್ಬರ್‌ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠಕ್ಕೆ ಕೋರಿದ್ದರು.

ಅದನ್ನು ಪುರಸ್ಕರಿಸಿದ ಪೀಠ, ಬುಧವಾರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಆದೇಶಿಸಿ, ವಿಚಾರಣೆ ಮುಂದೂಡಿದೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ, ಪೆಟಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಂಬಳ ಸ್ಪರ್ಧೆಗೆ ಅವಕಾಶವಿದೆ. ಆದರೆ, ಕಳೆದ ವರ್ಷದಿಂದ ಅದನ್ನು ಬೆಂಗಳೂರಿನಲ್ಲಿ ಆನಂತರ ಶಿವಮೊಗ್ಗದಲ್ಲೂ ನಡೆಸುವ ಚಿಂತನೆಯನ್ನು ಕಂಬಳ ಆಯೋಜನಾ ಸಮಿತಿ ಹೊಂದಿದೆ. ಇದಕ್ಕಾಗಿ 200 ಕೋಣಗಳನ್ನು 300 ಕಿ ಮೀ ದೂರವಿರುವ ದಕ್ಷಿಣ ಕನ್ನಡದಿಂದ ಟ್ರಕ್‌ನಲ್ಲಿ ತರಲಾಗಿದೆ. ಇದಕ್ಕೆ ನಿರ್ಬಂಧ ವಿಧಿಸಬೇಕು” ಎಂದು ಕೋರಿದರು.

“ಪ್ರಾಣಿ ಹಿಂಸೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕದಲ್ಲಿ ಕಂಬಳ, ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯಂಥ ಸಾಂಪ್ರದಾಯಿಕ ಸ್ಪರ್ಧೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಈಗ ಅದನ್ನು ವಾಣಿಜ್ಯೀಕರಣಗೊಳಿಸಲಾಗುತ್ತಿದೆ. ನ್ಯಾಯಾಲಯ ನಿರ್ಧರಿಸುವವರೆಗೆ ಕೋಣಗಳನ್ನು ಬೆಂಗಳೂರಿಗೆ ಟ್ರಕ್‌ನಲ್ಲಿ ತರದಂತೆ ಕಂಬಳ ಆಯೋಜನಾ ಸಮಿತಿಗೆ ಆದೇಶಿಸಬೇಕು” ಎಂದು ಕೋರಿದರು. ಅಂತಿಮವಾಗಿ ಪೀಠವು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ : ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...