Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...