Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...