Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....