Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...