Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...