Homeಕರ್ನಾಟಕಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

ಅಭಯಾರಣ್ಯದ ಮೂಲಕ ತಮ್ಮ ಜಮೀನಿಗೆ ತೆರಳಲು ಸಚಿವ ಕೆ.ಜೆ ಜಾರ್ಜ್ ಮಗನಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ಮೂಲಕ ತೆರಳಲು ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಗನಿಗೆ ಅನುಮತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದಲ್ಲಿನ ರಸ್ತೆ ಮಾರ್ಗದ ಮೂಲಕ ಹಗಲು-ರಾತ್ರಿ ಓಡಾಡಲು ಅವಕಾಶ ನೀಡುವಂತೆ ಸಚಿವ ಜಾರ್ಜ್ ಅವರ ಮಗ ರಾಣಾ ಜಾರ್ಜ್‌ ನ್ಯಾಯಾಲಯವನ್ನು ಕೋರಿದ್ದರು.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆಯನ್ನು ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾಚ್೯ 1ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದ್ದು, ರಾಣಾ ಜಾಜ್೯ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದೆ.

ತಮ್ಮ ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ಹಾನಿ ಮಾಡದಂತೆ ಇದೇ ವೇಳೆ ರಾಣಾ ಅವರಿಗೆ ಸೂಚಿಸಿದೆ.

“2024ರ ಮಾಚ್೯ 1ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶವು ರಾಣಾ ಜಾರ್ಜ್‌ ವಿರುದ್ಧ ಇರುವುದರಿಂದ ಅದನ್ನು ವಜಾ ಮಾಡಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೇ ಅವರ ಆಸ್ತಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು” ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ barandbench.com ವರದಿ ಮಾಡಿದೆ.

ತಾನು ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ನಂಬರ್‌ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ತಾನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಇಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವಿದೆ ಎಂದು ರಾಣಾ ನ್ಯಾಯಾಲಯಕ್ಕೆ ವಿವರಿಸಿದ್ದರು ಎಂದು ವರದಿ ತಿಳಿಸಿದೆ.

ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗವನ್ನು ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಹಾಲಿ ಪ್ರಕರಣದಲ್ಲಿ ರಾಣಾ ಜಾರ್ಜ್‌ ಅವರ ಜಮೀನು ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಈ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ರಾಣಾ ಅವರ ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಾನ್ಸೂನ್‌ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಅಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ರಾಣಾ ಅವರಿಗೆ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅವರ ಅರ್ಜಿಯಲ್ಲಿ ವಾದಿಸಲಾಗಿತ್ತು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯಿದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ರಾಣಾ ಅವರನ್ನು ತಮ್ಮ ಜಮೀನಿಗೆ ಸಂಜೆ 6ರಿಂದ ಬೆಳಿಗಿನ ಜಾವ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿಯು ಓಡಾಟಕ್ಕೆ ನಿರ್ಬಂಧಿಸಿದ್ದಾರೆ ಎಂದು ವಿವರಿಸಲಾಗಿದೆ. ಹೀಗಾಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ತಮ್ಮ ಜಮೀನಿಗೆ ಓಡಾಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಕೋರಿದ್ದರು.

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...