Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...