Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....