Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...