Homeಕರ್ನಾಟಕಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದಲೇ ಚೆಕ್‌ಗಳಿಗೆ ಸಹಿ ಹಾಕಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಸೆಪ್ಟೆಂಬರ್ 1 ರಿಂದ ಮರುಘಾ ಮಠಾಧೀಶರು ಬಂಧನದಲ್ಲಿದ್ದಾರೆ. ಮಠ ಮತ್ತು ಶಿಕ್ಷಣ ಸಂಸ್ಥೆಗಳ ನೌಕರರಿಗೆ ಮಾಸಿಕ ವೇತನ ಪಾವತಿಗಾಗಿ ಚೆಕ್‌ಗಳಿಗೆ ಸಹಿ ಹಾಕಲು ಅನುಮತಿ ಕೋರಲಾಗಿತ್ತು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ್ದಾರೆ. ಅಕ್ಟೋಬರ್ 3, 6 ಮತ್ತು 10 ರಂದು ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಆದೇಶಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೆಕ್‌ಗಳನ್ನು ತೆಗೆದುಕೊಂಡು ಹೋಗುವವರು ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಚೆಕ್‌ಗಳಿಗೆ ಸಹಿ ಮಾಡಬೇಕು. ಹೀಗೆ ಸಹಿ ಮಾಡಿದ ಚೆಕ್‌ಗಳ ನಕಲು ಪ್ರತಿಗಳನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ ತಿಂಗಳವರೆಗೆ ಮಾತ್ರ ಚೆಕ್‌ಗಳಿಗೆ ಸಹಿ ಹಾಕಲು ಅವಕಾಶ ನೀಡಲಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣಾ ನ್ಯಾಯಾಲಯಕ್ಕೆ ಈ ಕುರಿತು ಅರ್ಜಿ ಸಲ್ಲಿಸಬೇಕು. ವಿಚಾರಣಾ ನ್ಯಾಯಾಲಯವು ಈ ಮನವಿಯನ್ನು ಪರಿಗಣಿಸಿ ಆದೇಶಗಳನ್ನು ಹೊರಡಿಸುತ್ತದೆ. ‘ಮಠದ ಟ್ರಸ್ಟ್‌ನ ಏಕೈಕ ಟ್ರಸ್ಟಿಯಾಗಿದ್ದೇನೆ. ಟ್ರಸ್ಟ್‌ನ 150ಕ್ಕೂ ಹೆಚ್ಚು ಸಂಸ್ಥೆಗಳ 3,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಂಬಳವನ್ನು ಪಾವತಿಸಬೇಕಾಗಿದೆ’ ಎಂದು ಮನವಿಯಲ್ಲಿ ಮುರುಘಾ ಶರಣರು ತಿಳಿಸಿದ್ದಾರೆ.

ಸುಮಾರು 200 ಚೆಕ್‌ಗಳಿಗೆ ಕಾರಾಗೃಹದಿಂದ ಸಹಿ ಹಾಕಲು ಅನುಮತಿ ಕೋರಿ ಸಲ್ಲಿಸಲಾಗಿರುವ ಮನವಿಯಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂದು ಹೈಕೋರ್ಟ್ ಹೇಳಿತ್ತು. ಏಕೆಂದರೆ ಎಲ್ಲಾ ಚೆಕ್‌ ವಿವರದಲ್ಲಿ ಸೆಲ್ಫ್ ಆರ್‌ಟಿಜಿಎಸ್ (ರಿಯಲ್‌ ಟೈಮ್‌ ಗ್ರಾಸ್‌ ಸೆಟಲ್‌ಮೆಂಟ್‌) ಎಂದು ನಮೂದಿಸಲಾಗಿದೆ ಎನ್ನಲಾಗಿತ್ತು.

ಪಬ್ಲಿಕ್ ಪ್ರಾಸಿಕ್ಯೂಟರ್‌‌ ಕಿರಣ್ ಜವಳಿ ಅವರು ವಾದಿಸಿ, “ಆರೋಪಿಗಳು ಸಲ್ಲಿಸಿರುವ ಸಲ್ಲಿಕೆಗಳು ಮೇಲ್ನೋಟಕ್ಕೆ ಸತ್ಯವೆಂದು ತೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಅರ್ಜಿಯನ್ನು ಅರ್ಹತೆಯ ಆಧಾರದ ಮೇಲೆ ಚಿತ್ರದುರ್ಗದ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಜೈಲಿನಲ್ಲಿರುವ ಆರೋಪಿಗಳು ಸ್ವಯಂ ವಿಳಾಸವಿರುವ ಚೆಕ್‌ಗಳಿಗೆ ಸಹಿ ಹಾಕುವಂತೆ ಮನವಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿತ್ತು. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರ ಮುಂದೆ ಸ್ವಾಮೀಜಿ ಇದೇ ರೀತಿಯ ಮನವಿಯನ್ನು ಸಲ್ಲಿಸಿದ್ದರು. ನ್ಯಾಯಾಧೀಶರು ಮನವಿಯನ್ನು ತಿರಸ್ಕರಿಸಿದರು. ಹಾಗಾಗಿ, ಅದೇ ಅರ್ಜಿಯೊಂದಿಗೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮರುಘಾ ಶರಣರು ಪೀಠ ತೊರೆಯುವಂತೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಯತ್ನಾಳ್ ಪತ್ರ

ಲೈಂಗಿಕ ಕಿರುಕುಳ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣ: ಮುರುಘಾ ಶರಣರಿಗೆ ಜಾಮೀನು ನಿರಾಕರಣೆ

ಮಠದ ಸಾವಿರಾರು ನೌಕರರು ಸಂಬಳ, ಸಾರಿಗೆಯ ಖರ್ಚಿಗಾಗಿ ಮತ್ತು ಜೀವನ ನಿರ್ವಹಣೆಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜು, ಬ್ಯಾಂಕ್‌ಗಳು ಸೇರಿದಂತೆ ಎಸ್‌ಜೆಎಂ ವಿದ್ಯಾಸಂಸ್ಥೆಯ ಅಧೀನದಲ್ಲಿ ರಾಜ್ಯದ ವಿವಿಧೆಡೆ ಇರುವ ನೂರಾರು ಘಟಕಗಳ ನಿತ್ಯದ ಆಡಳಿತಕ್ಕೆ ಪಾರ್ಶ್ವವಾಯು ಹೊಡೆದಂತಾಗುತ್ತದೆ ಎಂದು ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶಿವಮೂರ್ತಿ ಮುರುಘಾ ಶರಣರು ಪೀಠದಲ್ಲಿ ಮುಂದುವರಿಯುವುದು ಶ್ರೀಮಠದ ಘನ ಪರಂಪರೆಯಗೆ ಕಳಂಕ ತರುವಂತಹ ಸಂಗತಿಯಾಗಿರುತ್ತದೆ. ಆದ್ದರಿಂದ ಶಿವಮೂರ್ತಿ ಶರಣರು ಈ ಕೂಡಲೇ ಸ್ವಇಚ್ಛೆಯಿಂದ ಪೀಠತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸುವ ಕಾನೂನುಬದ್ಧ ಪ್ರಕ್ರಿಯೆಗೆ ನಾಡಿನ ಭಕ್ತ ಸಮೂಹ ಮುಂದಾಗಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...