Homeಕರ್ನಾಟಕಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

- Advertisement -
- Advertisement -

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ತನ್ನ ಪ್ರತಿಕ್ರಿಯೆ ಅಥವಾ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು(ಜೂ.10) ಅವಕಾಶ ನೀಡಿದೆ.

ಜೂನ್ 4ರಂದು ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು ಮತ್ತು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಜೂನ್ 5ರಂದು ಹೈಕೋರ್ಟ್‌ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ವಿಚಾರಣೆಯನ್ನು ಇಂದಿಗೆ (ಜೂ.10) ಮುಂದೂಡಿತ್ತು.

ಇಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ಮುಂದುವರಿಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ (ಎಜಿ) ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ನಮ್ಮ ಪ್ರತಿಕ್ರಿಯೆ ಸಲ್ಲಿಸಲಾಗಿಲ್ಲ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿದ್ದು, ಒಂದು ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ಪೊಲೀಸ್‌ ಆಯುಕ್ತರು ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ, ಡಿಎನ್‌ಎ ಅಧಿಕಾರಿಗಳ ಜಾಮೀನು ಅರ್ಜಿಗಳು ಬಾಕಿ ಇದ್ದು, ಇಲ್ಲಿ ಹೇಳುವುದನ್ನು ಅವರು ಅಲ್ಲಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ” ಎಂದರು.

ಅದಕ್ಕೆ ಪೀಠವು “ನ್ಯಾಯಾಲಯದ ನಿರ್ದೇನಕ್ಕೆ ನೀವು ಪ್ರತಿಕ್ರಿಯೆ ಸಲ್ಲಿಸುವುದಿಲ್ಲ ಎಂದು ಹೇಳುತ್ತಿದ್ದೀರಾ?” ಎಂದಿತು. ಈ ವೇಳೆ ಎಜಿ ಅವರು “ದಯಮಾಡಿ ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು. ಕೆಲವು ವಿಚಾರಗಳಿವೆ ಸ್ವಾಮಿ” ಎಂದರು.

ಆಗ ಮತ್ತೆ ಪೀಠವು “ಸಮಸ್ಯೆ ಏನಿದೆ?” ಎಂದು ಮರು ಪ್ರಶ್ನಿಸಿತು. ಇದಕ್ಕೆ ಎಜಿ ಅವರು “ಮುಕ್ತ ನ್ಯಾಯಾಲಯದಲ್ಲಿ ಹೇಳುವುದರಿಂದ ಪೂರ್ವಾಗ್ರಹ ಉಂಟಾಗಲಿದೆ. ಸ್ವತಂತ್ರ ವಿಚಾರಣಾ ಆಯೋಗದಿಂದ ವರದಿ ಬರಲಿ. ನಾವು ಪಕ್ಷಪಾತಿಗಳಾಗಿದ್ದೇವೆ ಎನಿಸಬಾರದು. ಇದು ಒಂದು ತಿಂಗಳ ವಿಚಾರವಷ್ಟೆ” ಎಂದರು.

ಆಗ ಹೈಕೋರ್ಟ್‌ “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು. ಇದಕ್ಕೆ ಎಜಿ ಅವರು “ಕಳೆದ ವಿಚಾರಣೆಯಲ್ಲಿ ಪ್ರಕರಣವನ್ನು ಸಿಐಡಿಗೆ ನೀಡಲಾಗಿದೆ ಎಂದು ಹೇಳಿದ್ದೇನೆ. ಆ ದಿನವೇ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಇದನ್ನು ಆರೋಪಿಗಳು ಜಾಮೀನು ಅರ್ಜಿಯಲ್ಲಿ ಬಳಸಿಕೊಳ್ಳುತ್ತಾರೆ” ಎಂದರು. ಇದಕ್ಕೆ ಪೀಠವು “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು.

ಮುಂದಿನ ವಿಚಾರಣೆ ಜೂನ್ 12ಕ್ಕೆ ನಿಗದಿಯಾಗಿದೆ

Credit: livelaw.in

ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...