Homeಮುಖಪುಟತೀವ್ರ ವಿರೋಧದ ನಡುವೆ ಅದಾನಿಯ ಅಲಿಬಾಗ್ ಜೆಟ್ಟಿ ಯೋಜನೆ ಮುಂದುವರಿಸಲು ಹೈಕೋರ್ಟ್ ಅನುಮತಿ

ತೀವ್ರ ವಿರೋಧದ ನಡುವೆ ಅದಾನಿಯ ಅಲಿಬಾಗ್ ಜೆಟ್ಟಿ ಯೋಜನೆ ಮುಂದುವರಿಸಲು ಹೈಕೋರ್ಟ್ ಅನುಮತಿ

- Advertisement -
- Advertisement -

ಮುಂಬೈ: ಜಲಮಾರ್ಗಗಳ ಮೂಲಕ ಸಿಮೆಂಟ್ ಸಾಗಣೆಗೆ ಅನುಕೂಲವಾಗುವಂತೆ ಅಲಿಬಾಗ್ ಬಳಿ ಜೆಟ್ಟಿ ಮತ್ತು ಕನ್ವೇಯರ್ ಕಾರಿಡಾರ್ ನಿರ್ಮಾಣವನ್ನು ಮುಂದುವರಿಸಲು ಬಾಂಬೆ ಹೈಕೋರ್ಟ್ (ಎಚ್‌ಸಿ) ಬುಧವಾರ ಅದಾನಿ ಸಿಮೆಂಟೇಶನ್ ಲಿಮಿಟೆಡ್‌ಗೆ ಅನುಮತಿ ನೀಡಿದೆ. ಮ್ಯಾಂಗ್ರೋವ್ ಕಾಡುಗಳ ಮೇಲೆ ಈ ಯೋಜನೆಯ ಪರಿಣಾಮದ ಬಗ್ಗೆ ಪರಿಸರವಾದಿ ಸಂಘಟನೆಗಳ ವಿರೋಧದ ಹೊರತಾಗಿಯೂ ಈ ತೀರ್ಪು ಬಂದಿದೆ.

ಯೋಜನೆಯ ಆರ್ಥಿಕ ಪ್ರಯೋಜನಗಳನ್ನು ಗುರುತಿಸುವ ಜೊತೆಗೆ, ನ್ಯಾಯಾಲಯವು ಪರಿಸರ ಹಾನಿಯನ್ನು ತಗ್ಗಿಸಲು ಕಠಿಣ ಪರಿಸರ ಸುರಕ್ಷತೆಯ ಅಗತ್ಯವನ್ನು ಒತ್ತಿಹೇಳಿದೆ. ರಾಯಗಢ ಜಿಲ್ಲೆಯ ಅಲಿಬಾಗ್ ಬಳಿಯ ಶಹಬಾಜ್ ಮತ್ತು ಶಹಪುರ್ ಗ್ರಾಮಗಳಲ್ಲಿ ಅಂಬಾ ನದಿಯ ದಡದಲ್ಲಿ ಪ್ರಸ್ತಾಪಿಸಲಾದ ₹ 172 ಕೋಟಿ ಯೋಜನೆಯು ಜೆಟ್ಟಿ, ಕನ್ವೇಯರ್ ಕಾರಿಡಾರ್ ಮತ್ತು ಅಪ್ರೋಚ್ ರಸ್ತೆಯ ನಿರ್ಮಾಣವನ್ನು ಒಳಗೊಂಡಿದೆ. ಇದು ವರ್ಷಕ್ಕೆ 5 ಮಿಲಿಯನ್ ಮೆಟ್ರಿಕ್ ಟನ್ (MTPA) ಸಿಮೆಂಟ್, ಹಾರುಬೂದಿ, ಕಲ್ಲಿದ್ದಲು ಮತ್ತು ಪರ್ಯಾಯ ಇಂಧನಗಳು ಮತ್ತು ಕಚ್ಚಾ ವಸ್ತುಗಳನ್ನು (AFR) ನಿರ್ವಹಿಸುವ ನಿರೀಕ್ಷೆಯಿದೆ.

ಆರಂಭದಲ್ಲಿ, ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ (MCZMA) ತನ್ನ ಡಿಸೆಂಬರ್ 2020ರ ಆದೇಶದಲ್ಲಿ ಹಲವಾರು ಅನುಸರಣಾ ಸಮಸ್ಯೆಗಳನ್ನು ಎತ್ತಿತ್ತು. ಆದಾಗ್ಯೂ, ಈ ಯೋಜನೆಯು ಸಿಮೆಂಟ್ ಸಾಗಣೆಯನ್ನು ರಸ್ತೆಮಾರ್ಗಗಳಿಂದ ಜಲಮಾರ್ಗಗಳಿಗೆ ಬದಲಾಯಿಸುವ ಮೂಲಕ ರಸ್ತೆ ದಟ್ಟಣೆ ಮತ್ತು ಇಂಗಾಲದ ಹೆಜ್ಜೆಗುರುತನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಕಂಪನಿ ವಾದಿಸಿತು. ಪ್ರಸ್ತುತ, ಮುಂಬೈಗೆ ಸಿಮೆಂಟ್ ಪೂರೈಕೆಯ ಸರಿಸುಮಾರು 75% ಕರ್ನಾಟಕದ ಕಲಬುರಗಿ ಮತ್ತು ಮಹಾರಾಷ್ಟ್ರದ ವಿದರ್ಭದಿಂದ ರಸ್ತೆ ಸಾರಿಗೆಯ ಮೂಲಕ ಬರುತ್ತದೆ.

ಅಗತ್ಯ ಶಾಸನಬದ್ಧ ಅನುಮೋದನೆಗಳನ್ನು ಪಡೆದಿದ್ದರೂ, ಪರಿಸರ ಕಾರ್ಯಕರ್ತರು ಬಲವಾದ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮ್ಯಾಂಗ್ರೋವ್‌ಗಳ ಮೇಲಿನ ಪರಿಣಾಮದ ಬಗ್ಗೆ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಮ್ಯಾಂಗ್ರೋವ್ ಮೀಸಲು ಅರಣ್ಯದ ವ್ಯಾಪ್ತಿಗೆ ಬರುತ್ತದೆ ಮತ್ತು ಇಲ್ಲಿ ಸುಮಾರು 158 ಮ್ಯಾಂಗ್ರೋವ್ ಮರಗಳನ್ನು ಕಡಿಯುವ ಅಗತ್ಯವಿದೆ.

ಅದಾನಿ ಸಿಮೆಂಟೇಶನ್ ಲಿಮಿಟೆಡ್ ಅನ್ನು ಪ್ರತಿನಿಧಿಸುವ ವಕೀಲ ವಿಕ್ರಮ್ ನಂಕಾನಿ, ಈ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ಮುಂಬೈನ ಮೂಲಸೌಕರ್ಯ ಬೇಡಿಕೆಗಳನ್ನು ಪೂರೈಸುವುದರ ಜೊತೆಗೆ ವಾಯು ಮಾಲಿನ್ಯ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಇದು ಕೊಡುಗೆ ನೀಡುತ್ತದೆ ಎಂದು ಹೇಳಿದ್ದಾರೆ. ಕಡಿದುರುಳಿಸುವ ಮ್ಯಾಂಗ್ರೋವ್‌ಗಳ ಹತ್ತು ಪಟ್ಟು ಹೆಚ್ಚಿನ ಸಂಖ್ಯೆಯ ಸಸಿ ನೆಡುವಿಕೆ ಸೇರಿದಂತೆ ಪರಿಹಾರ ಅರಣ್ಯೀಕರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಭರವಸೆ ನೀಡಿದರು.

ಆದಾಗ್ಯೂ, ನಗರದಲ್ಲಿ ಪರಿಸರದ ಹಿತಾಸಕ್ತಿಗಳನ್ನು ಪ್ರತಿಪಾದಿಸುವ ಸರ್ಕಾರೇತರ ಸಂಸ್ಥೆ ಬಾಂಬೆ ಎನ್ವಿರಾನ್ಮೆಂಟಲ್ ಆಕ್ಷನ್ ಗ್ರೂಪ್ (BEAG) ಅನ್ನು ಪ್ರತಿನಿಧಿಸುವ ವಕೀಲ ಆದಿತ್ಯ ಮೆಹ್ತಾ, ಈ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಪರಿಸರ ಯೋಗಕ್ಷೇಮಕ್ಕಿಂತ ವಾಣಿಜ್ಯ ಲಾಭಗಳಿಗೆ ಆದ್ಯತೆ ನೀಡುವ ಪ್ರಯತ್ನವಾಗಿದೆ ಎಂದು ವಾದಿಸಿದ್ದಾರೆ. “ಸಿಎಸ್ಆರ್ ಉಪಕ್ರಮಗಳು ಕೇವಲ ಕಣ್ಣೋಟ ಮತ್ತು ಅಂತಹ ಚಟುವಟಿಕೆಗಳು ಪರಿಸರ ಸೂಕ್ಷ್ಮ ಮ್ಯಾಂಗ್ರೋವ್ ಆವಾಸಸ್ಥಾನಗಳ ವೆಚ್ಚದಲ್ಲಿ ಬರಬಾರದು” ಎಂದು ಅವರು ವಾದಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರನ್ನೊಳಗೊಂಡ ವಿಭಾಗೀಯ ಪೀಠವು ಅದಾನಿ ಸಿಮೆಂಟೇಶನ್ ಲಿಮಿಟೆಡ್ ಪರವಾಗಿ ತೀರ್ಪು ನೀಡಿದೆ. ಸುಸ್ಥಿರ ಅಭಿವೃದ್ಧಿಯ ಅಗತ್ಯವನ್ನು ಒತ್ತಿಹೇಳಿದೆ. ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಇಂಗಾಲದ ಹೊರಸೂಸುವಿಕೆಯನ್ನು 60%ಕ್ಕಿಂತ ಹೆಚ್ಚು ಕಡಿಮೆ ಮಾಡುವ ಯೋಜನೆಯ ಸಾಮರ್ಥ್ಯವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ. ಆದಾಗ್ಯೂ ಕನಿಷ್ಠ ಪರಿಸರ ಪರಿಣಾಮವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಅದು ಒತ್ತಿಹೇಳಿದೆ ಮತ್ತು ಕಂಪನಿಯು ಕಟ್ಟುನಿಟ್ಟಾದ ಅನುಸರಣಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದೆ.

“ಸುಸ್ಥಿರ ಅಭಿವೃದ್ಧಿಯು ಆರ್ಥಿಕ ಬೆಳವಣಿಗೆಯನ್ನು ಪರಿಸರ ಸಂರಕ್ಷಣೆಯೊಂದಿಗೆ ಸಮತೋಲನಗೊಳಿಸುವುದನ್ನು ಅಗತ್ಯಗೊಳಿಸುತ್ತದೆ. ವಾಣಿಜ್ಯ ಯೋಜನೆಗಳು ನೈಸರ್ಗಿಕ ಸಂಪನ್ಮೂಲಗಳನ್ನು ಅತಿಯಾಗಿ ಖಾಲಿ ಮಾಡಬಾರದು, ಆದರೆ ಯಾವುದೇ ಅನಿವಾರ್ಯವಾಗಿ ಮಾಡಲೇಬೇಕಾದ ನಷ್ಟವನ್ನು ಬೇರೊಂದು ಕ್ರಮಗಳ ಮೂಲಕ ಸರಿದೂಗಿಸಬೇಕು. ಅರ್ಜಿದಾರರು ಶಾಸನಬದ್ಧ ಅನುಮತಿಗಳನ್ನು ಪಡೆದಿರುವುದರಿಂದ ಅವರು ಎಲ್ಲಾ ಪರಿಸರ ಪರಿಸ್ಥಿತಿಗಳನ್ನು ಪೂರೈಸಿದರೆ, ಯೋಜನೆಯು ಅನುಮೋದನೆಗೆ ಅರ್ಹವಾಗಿದೆ ಎಂದು ನಮಗೆ ಮನವರಿಕೆಯಾಗಿದೆ” ಎಂದು ಪೀಠವು ಅಭಿಪ್ರಾಯಿಸಿದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MOEFCC) ಮತ್ತು MCZMA ಸೇರಿದಂತೆ ನಿಯಂತ್ರಕ ಅಧಿಕಾರಿಗಳು ವಿಧಿಸಿರುವ ಎಲ್ಲಾ ಷರತ್ತುಗಳನ್ನು ಪಾಲಿಸುವುದನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಅದಾನಿ ಸಿಮೆಂಟೇಶನ್ ಲಿಮಿಟೆಡ್‌ಗೆ ನಿರ್ದೇಶನ ನೀಡಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...