Homeಮುಖಪುಟಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

"ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ"

- Advertisement -
- Advertisement -

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನರ್ಸಿಂಗ್ ನೌಕರರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಆಸ್ಪತ್ರೆ, ಮುಷ್ಕರವನ್ನು ಕೊನೆಗೊಳಿಸುವಂತೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯ ಹೈಕೋರ್ಟ್, ‘ಮುಂದಿನ ಆದೇಶದವರೆಗೆ ಮುಷ್ಕರ ನಡೆಸುವುದನ್ನು ತಡೆಯಲಾಗುವುದು ಮತ್ತು ಆಸ್ಪತ್ರೆಯ ಮನವಿಗೆ ಸ್ಪಂದಿಸಿ’ ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೊಳಿಸಬೇಕು ಆಸ್ಪತ್ರೆ ಕೇಳಿಕೊಂಡಿತ್ತು. ಜೊತೆಗೆ ಇದನ್ನು ಕಾನೂನುಬಾಹಿರ ಎಂದು ಕರೆದು, ಕೈಗಾರಿಕಾ ವಿವಾದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ಆಸ್ಪತ್ರೆಯ ವಿವಾದಗಳನ್ನು ಗಮನಿಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ-ಸದಸ್ಯ ನ್ಯಾಯಪೀಠವು “ನರ್ಸಿಂಗ್ ನೌಕರರ ಬೇಡಿಕೆಗಳನ್ನು ಆಸ್ಪತ್ರೆಯು ಪರಿಗಣಿಸುತ್ತಿದೆ. ಆದರೆ ಸಧ್ಯಕ್ಕೆ, ಮುಂದಿನ ಆದೇಶದವರೆಗೆ ಮುಷ್ಕರವನ್ನು ಮುಂದುವರಿಸುವುದನ್ನು ತಡೆಯಲಾಗುತ್ತಿದೆ” ಎಂದು ಹೇಳಿದರು.

ಆಸ್ಪತ್ರೆ ಇಂದು ಸಂಜೆ ದಾದಿಯರನ್ನು ಮಾತುಕತೆಗೆ ಕರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಸೇವೆಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವೂ ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ನರ್ಸಿಂಗ್ ನೌಕರರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದರು.

“ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ:  ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಸ್ತೂರ್‌ಬಾ vs ಗಾಂಧಿ ಪುಸ್ತಕದ ಆಯ್ದ ಅಧ್ಯಾಯ: ಕಷ್ಟವಾದರೂ ಇಷ್ಟಪಟ್ಟು ಬದುಕಿದ ಕಸ್ತೂರ್‌ಬಾ ಗಾಂಧಿ…

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ. ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಮಗೆ ಸಹಾಯ ಮಾಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....