Homeಮುಖಪುಟಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

"ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ"

- Advertisement -
- Advertisement -

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನರ್ಸಿಂಗ್ ನೌಕರರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಆಸ್ಪತ್ರೆ, ಮುಷ್ಕರವನ್ನು ಕೊನೆಗೊಳಿಸುವಂತೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯ ಹೈಕೋರ್ಟ್, ‘ಮುಂದಿನ ಆದೇಶದವರೆಗೆ ಮುಷ್ಕರ ನಡೆಸುವುದನ್ನು ತಡೆಯಲಾಗುವುದು ಮತ್ತು ಆಸ್ಪತ್ರೆಯ ಮನವಿಗೆ ಸ್ಪಂದಿಸಿ’ ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೊಳಿಸಬೇಕು ಆಸ್ಪತ್ರೆ ಕೇಳಿಕೊಂಡಿತ್ತು. ಜೊತೆಗೆ ಇದನ್ನು ಕಾನೂನುಬಾಹಿರ ಎಂದು ಕರೆದು, ಕೈಗಾರಿಕಾ ವಿವಾದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ಆಸ್ಪತ್ರೆಯ ವಿವಾದಗಳನ್ನು ಗಮನಿಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ-ಸದಸ್ಯ ನ್ಯಾಯಪೀಠವು “ನರ್ಸಿಂಗ್ ನೌಕರರ ಬೇಡಿಕೆಗಳನ್ನು ಆಸ್ಪತ್ರೆಯು ಪರಿಗಣಿಸುತ್ತಿದೆ. ಆದರೆ ಸಧ್ಯಕ್ಕೆ, ಮುಂದಿನ ಆದೇಶದವರೆಗೆ ಮುಷ್ಕರವನ್ನು ಮುಂದುವರಿಸುವುದನ್ನು ತಡೆಯಲಾಗುತ್ತಿದೆ” ಎಂದು ಹೇಳಿದರು.

ಆಸ್ಪತ್ರೆ ಇಂದು ಸಂಜೆ ದಾದಿಯರನ್ನು ಮಾತುಕತೆಗೆ ಕರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಸೇವೆಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವೂ ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ನರ್ಸಿಂಗ್ ನೌಕರರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದರು.

“ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ:  ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಸ್ತೂರ್‌ಬಾ vs ಗಾಂಧಿ ಪುಸ್ತಕದ ಆಯ್ದ ಅಧ್ಯಾಯ: ಕಷ್ಟವಾದರೂ ಇಷ್ಟಪಟ್ಟು ಬದುಕಿದ ಕಸ್ತೂರ್‌ಬಾ ಗಾಂಧಿ…

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ. ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಮಗೆ ಸಹಾಯ ಮಾಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...