Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...