Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...