Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...