Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...