Homeಮುಖಪುಟನಟ ಮೋಹನ್‌ಲಾಲ್ ಆನೆ ದಂತ ಮಾಲೀಕತ್ವ ರದ್ದುಗೊಳಿಸಿದ ಹೈಕೋರ್ಟ್ : ಕೇರಳ ಸರ್ಕಾರಕ್ಕೆ ಹಿನ್ನಡೆ

ನಟ ಮೋಹನ್‌ಲಾಲ್ ಆನೆ ದಂತ ಮಾಲೀಕತ್ವ ರದ್ದುಗೊಳಿಸಿದ ಹೈಕೋರ್ಟ್ : ಕೇರಳ ಸರ್ಕಾರಕ್ಕೆ ಹಿನ್ನಡೆ

- Advertisement -
- Advertisement -

ಆನೆ ದಂತ ಪ್ರಕರಣದಲ್ಲಿ ನಟ ಮೋಹನ್‌ಲಾಲ್ ಮತ್ತು ಕೇರಳ ಸರ್ಕಾರಕ್ಕೆ ಕಾನೂನಾತ್ಮಕ ಹಿನ್ನಡೆಯಾಗಿದೆ. ಮೋಹನ್‌ಲಾಲ್‌ರ ಆನೆ ದಂತ ಸಂಗ್ರಹವನ್ನು ಕಾನೂನುಬದ್ಧಗೊಳಿಸಿದ್ದ ಕೇರಳ ಸರ್ಕಾರದ ಆದೇಶವನ್ನು ಹೈಕೋರ್ಟ್ ಶುಕ್ರವಾರ (ಅ.24) ರದ್ದುಗೊಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮೋಹನ್‌ಲಾಲ್ ಪರ ವಕೀಲರು, “ಇದು ಕೇವಲ ತಾಂತ್ರಿಕ ಸಮಸ್ಯೆಯಷ್ಟೇ” ಎಂದಿದ್ದಾರೆ.

ದಂತ ಹೊಂದಲು ಮೋಹನ್‌ಲಾಲ್ ಅವರಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದುಗೊಳಿಸಿರುವ ಹೈಕೋರ್ಟ್, ನೆಲದ ಕಾನೂನಿನ ಕಾರ್ಯವಿಧಾನಗಳ ಅನುಸಾರ ಹೊಸ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೋಹನ್‌ಲಾಲ್ ಅವರ ದಂತ ಸಂಗ್ರಹವನ್ನು ಕ್ರಮಬದ್ಧಗೊಳಿಸಿದ್ದ 2015ರ ಕೇರಳ ಸರ್ಕಾರದ ಆದೇಶವು ಕಾರ್ಯವಿಧಾನದ ಲೋಪಗಳಿಂದ ಕೂಡಿದೆ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಎಂದಿಗೂ ಪ್ರಕಟವಾಗದ ಕಾರಣ ಅದು ಅಮಾನ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಸರ್ಕಾರ ದಂತ ಹೊಂದುವುದನ್ನು ಕಾನೂನುಬದ್ಧಗೊಳಿಸುವ ಕ್ರಮವು ಶಾಸನಬದ್ಧ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದಿದೆ.

ಈ ಪ್ರಕರಣವು ಡಿಸೆಂಬರ್ 21, 2011ರಂದು ಆದಾಯ ತೆರಿಗೆ ಇಲಾಖೆಯು ಕೊಚ್ಚಿಯ ತೇವಾರದಲ್ಲಿರುವ ಮೋಹನ್‌ಲಾಲ್ ಅವರ ಮನೆ ಮೇಲೆ ದಾಳಿ ನಡೆಸಿ ಎರಡು ಜೋಡಿ ದಂತಗಳನ್ನು ಪತ್ತೆ ಮಾಡಿರುವುದಕ್ಕೆ ಸಂಬಂಧಿಸಿದೆ. ದಾಳಿಯ ನಂತರ, ಅರಣ್ಯ ಇಲಾಖೆಯು ಅಕ್ರಮವಾಗಿ ದಂತ ಹೊಂದಿದ್ದಕ್ಕಾಗಿ ಮೋಹನ್‌ಲಾಲ್ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಸರ್ಕಾರ ಈ ಪ್ರಕರಣವನ್ನು ಹಿಂಪಡೆದಾಗ ವಿಷಯ ಮತ್ತೆ ಮುನ್ನೆಲೆಗೆ ಬಂದಿತ್ತು. ನಂತರ ಪೆರುಂಬವೂರ್ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿತ್ತು.

ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೋಹನ್‌ಲಾಲ್ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ನಡುವೆ, ಜೇಮ್ಸ್ ಮ್ಯಾಥ್ಯೂ ಎಂಬ ವ್ಯಕ್ತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಆನೆ ದಂತಗಳನ್ನು ಹೊಂದಿದ್ದಕ್ಕಾಗಿ ಮೊಹನ್‌ಲಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಈ ಹಿಂದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ಅವರಿಗೆ ವೈಯಕ್ತಿಕವಾಗಿ ಹಾಜರಾಗುವಂತೆ ವಿಚಾರಣಾ ನ್ಯಾಯಾಲಯ ಸೂಚಿಸಿತ್ತು. ಸರ್ಕಾರದ ಪ್ರಕರಣ ಹಿಂತೆಗೆದುಕೊಳ್ಳುವ ನಿರ್ಧಾರವು ಸರಿಯಾಗಿಲ್ಲ ಎಂದು ಹೇಳಿತ್ತು.

ಹೈಕೋರ್ಟ್‌ ಆರಂಭದಲ್ಲಿ ಮೋಹನ್‌ಲಾಲ್ ವಿರುದ್ದದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ನಂತರ ವಿಚಾರಣೆ ಮುಂದುವರಿಸಿ, ಇದೀಗ ತೀರ್ಪು ಪ್ರಕಟಿಸಿದೆ. ಈ ತೀರ್ಪಿನ ಮೂಲಕ ವನ್ಯಜೀವಿ ರಕ್ಷಣೆ ಮತ್ತು ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸೂಕ್ತ ಪ್ರಕ್ರಿಯೆಯ ಅಗತ್ಯವನ್ನು ಹೈಕೋರ್ಟ್ ಪುನರುಚ್ಚರಿಸಿದೆ.

ಹೈಕೋರ್ಟ್ ತೀರ್ಪು ಮೋಹನ್‌ಲಾಲ್ ದಂತ ಹೊಂದಿರುವ ಪ್ರಕರಣವನ್ನು ಮತ್ತೆ ತೆರೆಯಲಿದೆ. ರಾಜ್ಯ ಸರ್ಕಾರ ತನ್ನ ಹಿಂದಿನ ನಿರ್ಧಾರಗಳಲ್ಲಿನ ಕಾರ್ಯವಿಧಾನದ ತಪ್ಪುಗಳನ್ನು ಸರಿಪಡಿಸಲು ಒತ್ತಡ ಹೇರುತ್ತದೆ.

ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ; ನ.3 ರಂದು ಬಿ.ಆರ್. ಗವಾಯಿ ನಿವೃತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...