Homeಮುಖಪುಟಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

ಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನ್ಯಾಯಾಲಯಗಳಿಗೆ “ಇ-ಸಂಪರ್ಕ” ದ ಮಹತ್ವವನ್ನು ಜಮ್ಮು ಕಾಶ್ಮೀರ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ರಜನೇಶ್ ಓಸ್ವಾಲ್ ಅವರನ್ನೊಳಗೊಂಡ ನ್ಯಾಯಪೀಠ, “ನ್ಯಾಯಾಲಯಗಳಿಗೆ ಇ-ಸಂಪರ್ಕ ಲಭ್ಯತೆಯು ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವ ವಿಷಯವಾಗಿದೆ. ಇದು ಮೂಲಭೂತ ಹಕ್ಕು ಮತ್ತು ಅದನ್ನು ಯಾವುದೇ ರೀತಿಯಲ್ಲಿ ತಡೆಯಲು ಸಾಧ್ಯವಿಲ್ಲ. ”

“ಕೊರೊನಾ ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ನಿರ್ಬಂಧಗಳ ಪ್ರಸ್ತುತ ಕಾಲದಲ್ಲಿ, ಇ-ಸಂಪರ್ಕದ ಲಭ್ಯತೆ ಇಲ್ಲದಿದ್ದರೆ ಯಾವುದೇ ನ್ಯಾಯಾಲಯವು ಅಗತ್ಯ ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಾಲಯವು ಈಗ ಕೇಂದ್ರಾಡಳಿತ ಪ್ರದೇಶ ಆಗಿರುವ ಜಮ್ಮುಕಾಶ್ಮೀರದ ಲಾಕ್‌ಡೌನ್ ಪರಿಸ್ಥಿತಿಯ ಕುರಿತು ಹಲವಾರು ಅರ್ಜಿಗಳನ್ನು ಆಲಿಸುತ್ತಿತ್ತು. ವೈದ್ಯರಿಗೆ ಪಿಪಿಇಗಳನ್ನು ಪೂರೈಸುವುದು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ, ದಾರಿತಪ್ಪಿ ದನಕರುಗಳು ಹಾಗೂ ಪ್ರಾಣಿಗಳಿಂದ ಎದುರಿಸುತ್ತಿರುವ ತೊಂದರೆಗಳವರೆಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿತು.

ಉದಂಪೂರ್ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲು ಬಿಎಸ್ಎನ್ಎಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ

ವಿಚಾರಣೆ ನಂತರ, ಉದಂಪೂರ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಕಾರಣದಿಂದಾಗಿ ಉಪಕರಣಗಳು ಸುಟ್ಟುಹೋಗಿವೆ ಎಂದು ಆರಂಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದ್ದರೂ, ಐಟಿ ರಿಜಿಸ್ಟ್ರಾರ್ ಸಲ್ಲಿಸಿದ ವರದಿಯನ್ನು ನ್ಯಾಯಪೀಠ ಗಮನಕ್ಕೆ ತೆಗೆದುಕೊಂಡಿತು.

ಇದು ನ್ಯಾಯಾಲಯದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಪ್ರಯತ್ನ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಉಧಂಪುರ್ ನ್ಯಾಯಾಲಯದಲ್ಲಿ ಕನ್ವರ್ಟರ್‌ ಮತ್ತು ರೂಟರ್ ಅನ್ನು ಸ್ಥಾಪಿಸುವಂತೆ ಬಿಎಸ್ಎನ್ಎಲ್‌ಗೆ ನಿರ್ದೇಶನ ನೀಡಿತು. ಬಿಎಸ್ಎನ್ಎಲ್‌ನಿಂದ ಕೇಂದ್ರಾಡಳಿತದ ನ್ಯಾಯಾಲಯಗಳಿಗೆ ಇ-ಸಂಪರ್ಕವನ್ನು ಒದಗಿಸುವ ಸ್ಥಿತಿಯ ಬಗ್ಗೆ ಹೊಸ ವರದಿಯನ್ನು ಕೇಳಿದೆ.

10 ತಾಣಗಳಿಗೆ ವಿಎಸ್ಎಟಿ ಸೌಲಭ್ಯಗಳ ಅಗತ್ಯತೆಯ ಬಗ್ಗೆ ಬಿಎಸ್ಎನ್ಎಲ್ ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಂಗ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅದು ಉಲ್ಲೇಖಿಸಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ಇದನ್ನು ತುರ್ತಾಗಿ ಪರಿಶೀಲಿಸಲು ಹಾಗೂ ಜೂನ್ 10 ರಂದು ನಡೆಯುವ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಮಾಡಲು ಕೇಳಿದೆ.


ಓದಿ:  2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು, ಅವರು ಕ್ಲಿಕ್ಕಿಸಿದ ಫೋಟೋಗಳನ್ನು ವೀಕ್ಷಿಸಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...