Homeಮುಖಪುಟಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

ಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನ್ಯಾಯಾಲಯಗಳಿಗೆ “ಇ-ಸಂಪರ್ಕ” ದ ಮಹತ್ವವನ್ನು ಜಮ್ಮು ಕಾಶ್ಮೀರ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ರಜನೇಶ್ ಓಸ್ವಾಲ್ ಅವರನ್ನೊಳಗೊಂಡ ನ್ಯಾಯಪೀಠ, “ನ್ಯಾಯಾಲಯಗಳಿಗೆ ಇ-ಸಂಪರ್ಕ ಲಭ್ಯತೆಯು ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವ ವಿಷಯವಾಗಿದೆ. ಇದು ಮೂಲಭೂತ ಹಕ್ಕು ಮತ್ತು ಅದನ್ನು ಯಾವುದೇ ರೀತಿಯಲ್ಲಿ ತಡೆಯಲು ಸಾಧ್ಯವಿಲ್ಲ. ”

“ಕೊರೊನಾ ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ನಿರ್ಬಂಧಗಳ ಪ್ರಸ್ತುತ ಕಾಲದಲ್ಲಿ, ಇ-ಸಂಪರ್ಕದ ಲಭ್ಯತೆ ಇಲ್ಲದಿದ್ದರೆ ಯಾವುದೇ ನ್ಯಾಯಾಲಯವು ಅಗತ್ಯ ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಾಲಯವು ಈಗ ಕೇಂದ್ರಾಡಳಿತ ಪ್ರದೇಶ ಆಗಿರುವ ಜಮ್ಮುಕಾಶ್ಮೀರದ ಲಾಕ್‌ಡೌನ್ ಪರಿಸ್ಥಿತಿಯ ಕುರಿತು ಹಲವಾರು ಅರ್ಜಿಗಳನ್ನು ಆಲಿಸುತ್ತಿತ್ತು. ವೈದ್ಯರಿಗೆ ಪಿಪಿಇಗಳನ್ನು ಪೂರೈಸುವುದು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ, ದಾರಿತಪ್ಪಿ ದನಕರುಗಳು ಹಾಗೂ ಪ್ರಾಣಿಗಳಿಂದ ಎದುರಿಸುತ್ತಿರುವ ತೊಂದರೆಗಳವರೆಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿತು.

ಉದಂಪೂರ್ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲು ಬಿಎಸ್ಎನ್ಎಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ

ವಿಚಾರಣೆ ನಂತರ, ಉದಂಪೂರ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಕಾರಣದಿಂದಾಗಿ ಉಪಕರಣಗಳು ಸುಟ್ಟುಹೋಗಿವೆ ಎಂದು ಆರಂಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದ್ದರೂ, ಐಟಿ ರಿಜಿಸ್ಟ್ರಾರ್ ಸಲ್ಲಿಸಿದ ವರದಿಯನ್ನು ನ್ಯಾಯಪೀಠ ಗಮನಕ್ಕೆ ತೆಗೆದುಕೊಂಡಿತು.

ಇದು ನ್ಯಾಯಾಲಯದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಪ್ರಯತ್ನ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಉಧಂಪುರ್ ನ್ಯಾಯಾಲಯದಲ್ಲಿ ಕನ್ವರ್ಟರ್‌ ಮತ್ತು ರೂಟರ್ ಅನ್ನು ಸ್ಥಾಪಿಸುವಂತೆ ಬಿಎಸ್ಎನ್ಎಲ್‌ಗೆ ನಿರ್ದೇಶನ ನೀಡಿತು. ಬಿಎಸ್ಎನ್ಎಲ್‌ನಿಂದ ಕೇಂದ್ರಾಡಳಿತದ ನ್ಯಾಯಾಲಯಗಳಿಗೆ ಇ-ಸಂಪರ್ಕವನ್ನು ಒದಗಿಸುವ ಸ್ಥಿತಿಯ ಬಗ್ಗೆ ಹೊಸ ವರದಿಯನ್ನು ಕೇಳಿದೆ.

10 ತಾಣಗಳಿಗೆ ವಿಎಸ್ಎಟಿ ಸೌಲಭ್ಯಗಳ ಅಗತ್ಯತೆಯ ಬಗ್ಗೆ ಬಿಎಸ್ಎನ್ಎಲ್ ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಂಗ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅದು ಉಲ್ಲೇಖಿಸಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ಇದನ್ನು ತುರ್ತಾಗಿ ಪರಿಶೀಲಿಸಲು ಹಾಗೂ ಜೂನ್ 10 ರಂದು ನಡೆಯುವ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಮಾಡಲು ಕೇಳಿದೆ.


ಓದಿ:  2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು, ಅವರು ಕ್ಲಿಕ್ಕಿಸಿದ ಫೋಟೋಗಳನ್ನು ವೀಕ್ಷಿಸಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...