Homeಮುಖಪುಟಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

ಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನ್ಯಾಯಾಲಯಗಳಿಗೆ “ಇ-ಸಂಪರ್ಕ” ದ ಮಹತ್ವವನ್ನು ಜಮ್ಮು ಕಾಶ್ಮೀರ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ರಜನೇಶ್ ಓಸ್ವಾಲ್ ಅವರನ್ನೊಳಗೊಂಡ ನ್ಯಾಯಪೀಠ, “ನ್ಯಾಯಾಲಯಗಳಿಗೆ ಇ-ಸಂಪರ್ಕ ಲಭ್ಯತೆಯು ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವ ವಿಷಯವಾಗಿದೆ. ಇದು ಮೂಲಭೂತ ಹಕ್ಕು ಮತ್ತು ಅದನ್ನು ಯಾವುದೇ ರೀತಿಯಲ್ಲಿ ತಡೆಯಲು ಸಾಧ್ಯವಿಲ್ಲ. ”

“ಕೊರೊನಾ ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ನಿರ್ಬಂಧಗಳ ಪ್ರಸ್ತುತ ಕಾಲದಲ್ಲಿ, ಇ-ಸಂಪರ್ಕದ ಲಭ್ಯತೆ ಇಲ್ಲದಿದ್ದರೆ ಯಾವುದೇ ನ್ಯಾಯಾಲಯವು ಅಗತ್ಯ ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಾಲಯವು ಈಗ ಕೇಂದ್ರಾಡಳಿತ ಪ್ರದೇಶ ಆಗಿರುವ ಜಮ್ಮುಕಾಶ್ಮೀರದ ಲಾಕ್‌ಡೌನ್ ಪರಿಸ್ಥಿತಿಯ ಕುರಿತು ಹಲವಾರು ಅರ್ಜಿಗಳನ್ನು ಆಲಿಸುತ್ತಿತ್ತು. ವೈದ್ಯರಿಗೆ ಪಿಪಿಇಗಳನ್ನು ಪೂರೈಸುವುದು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ, ದಾರಿತಪ್ಪಿ ದನಕರುಗಳು ಹಾಗೂ ಪ್ರಾಣಿಗಳಿಂದ ಎದುರಿಸುತ್ತಿರುವ ತೊಂದರೆಗಳವರೆಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿತು.

ಉದಂಪೂರ್ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲು ಬಿಎಸ್ಎನ್ಎಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ

ವಿಚಾರಣೆ ನಂತರ, ಉದಂಪೂರ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಕಾರಣದಿಂದಾಗಿ ಉಪಕರಣಗಳು ಸುಟ್ಟುಹೋಗಿವೆ ಎಂದು ಆರಂಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದ್ದರೂ, ಐಟಿ ರಿಜಿಸ್ಟ್ರಾರ್ ಸಲ್ಲಿಸಿದ ವರದಿಯನ್ನು ನ್ಯಾಯಪೀಠ ಗಮನಕ್ಕೆ ತೆಗೆದುಕೊಂಡಿತು.

ಇದು ನ್ಯಾಯಾಲಯದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಪ್ರಯತ್ನ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಉಧಂಪುರ್ ನ್ಯಾಯಾಲಯದಲ್ಲಿ ಕನ್ವರ್ಟರ್‌ ಮತ್ತು ರೂಟರ್ ಅನ್ನು ಸ್ಥಾಪಿಸುವಂತೆ ಬಿಎಸ್ಎನ್ಎಲ್‌ಗೆ ನಿರ್ದೇಶನ ನೀಡಿತು. ಬಿಎಸ್ಎನ್ಎಲ್‌ನಿಂದ ಕೇಂದ್ರಾಡಳಿತದ ನ್ಯಾಯಾಲಯಗಳಿಗೆ ಇ-ಸಂಪರ್ಕವನ್ನು ಒದಗಿಸುವ ಸ್ಥಿತಿಯ ಬಗ್ಗೆ ಹೊಸ ವರದಿಯನ್ನು ಕೇಳಿದೆ.

10 ತಾಣಗಳಿಗೆ ವಿಎಸ್ಎಟಿ ಸೌಲಭ್ಯಗಳ ಅಗತ್ಯತೆಯ ಬಗ್ಗೆ ಬಿಎಸ್ಎನ್ಎಲ್ ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಂಗ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅದು ಉಲ್ಲೇಖಿಸಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ಇದನ್ನು ತುರ್ತಾಗಿ ಪರಿಶೀಲಿಸಲು ಹಾಗೂ ಜೂನ್ 10 ರಂದು ನಡೆಯುವ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಮಾಡಲು ಕೇಳಿದೆ.


ಓದಿ:  2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು, ಅವರು ಕ್ಲಿಕ್ಕಿಸಿದ ಫೋಟೋಗಳನ್ನು ವೀಕ್ಷಿಸಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...