Homeಮುಖಪುಟಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

ಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನ್ಯಾಯಾಲಯಗಳಿಗೆ “ಇ-ಸಂಪರ್ಕ” ದ ಮಹತ್ವವನ್ನು ಜಮ್ಮು ಕಾಶ್ಮೀರ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ರಜನೇಶ್ ಓಸ್ವಾಲ್ ಅವರನ್ನೊಳಗೊಂಡ ನ್ಯಾಯಪೀಠ, “ನ್ಯಾಯಾಲಯಗಳಿಗೆ ಇ-ಸಂಪರ್ಕ ಲಭ್ಯತೆಯು ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವ ವಿಷಯವಾಗಿದೆ. ಇದು ಮೂಲಭೂತ ಹಕ್ಕು ಮತ್ತು ಅದನ್ನು ಯಾವುದೇ ರೀತಿಯಲ್ಲಿ ತಡೆಯಲು ಸಾಧ್ಯವಿಲ್ಲ. ”

“ಕೊರೊನಾ ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ನಿರ್ಬಂಧಗಳ ಪ್ರಸ್ತುತ ಕಾಲದಲ್ಲಿ, ಇ-ಸಂಪರ್ಕದ ಲಭ್ಯತೆ ಇಲ್ಲದಿದ್ದರೆ ಯಾವುದೇ ನ್ಯಾಯಾಲಯವು ಅಗತ್ಯ ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಾಲಯವು ಈಗ ಕೇಂದ್ರಾಡಳಿತ ಪ್ರದೇಶ ಆಗಿರುವ ಜಮ್ಮುಕಾಶ್ಮೀರದ ಲಾಕ್‌ಡೌನ್ ಪರಿಸ್ಥಿತಿಯ ಕುರಿತು ಹಲವಾರು ಅರ್ಜಿಗಳನ್ನು ಆಲಿಸುತ್ತಿತ್ತು. ವೈದ್ಯರಿಗೆ ಪಿಪಿಇಗಳನ್ನು ಪೂರೈಸುವುದು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ, ದಾರಿತಪ್ಪಿ ದನಕರುಗಳು ಹಾಗೂ ಪ್ರಾಣಿಗಳಿಂದ ಎದುರಿಸುತ್ತಿರುವ ತೊಂದರೆಗಳವರೆಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿತು.

ಉದಂಪೂರ್ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲು ಬಿಎಸ್ಎನ್ಎಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ

ವಿಚಾರಣೆ ನಂತರ, ಉದಂಪೂರ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಕಾರಣದಿಂದಾಗಿ ಉಪಕರಣಗಳು ಸುಟ್ಟುಹೋಗಿವೆ ಎಂದು ಆರಂಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದ್ದರೂ, ಐಟಿ ರಿಜಿಸ್ಟ್ರಾರ್ ಸಲ್ಲಿಸಿದ ವರದಿಯನ್ನು ನ್ಯಾಯಪೀಠ ಗಮನಕ್ಕೆ ತೆಗೆದುಕೊಂಡಿತು.

ಇದು ನ್ಯಾಯಾಲಯದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಪ್ರಯತ್ನ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಉಧಂಪುರ್ ನ್ಯಾಯಾಲಯದಲ್ಲಿ ಕನ್ವರ್ಟರ್‌ ಮತ್ತು ರೂಟರ್ ಅನ್ನು ಸ್ಥಾಪಿಸುವಂತೆ ಬಿಎಸ್ಎನ್ಎಲ್‌ಗೆ ನಿರ್ದೇಶನ ನೀಡಿತು. ಬಿಎಸ್ಎನ್ಎಲ್‌ನಿಂದ ಕೇಂದ್ರಾಡಳಿತದ ನ್ಯಾಯಾಲಯಗಳಿಗೆ ಇ-ಸಂಪರ್ಕವನ್ನು ಒದಗಿಸುವ ಸ್ಥಿತಿಯ ಬಗ್ಗೆ ಹೊಸ ವರದಿಯನ್ನು ಕೇಳಿದೆ.

10 ತಾಣಗಳಿಗೆ ವಿಎಸ್ಎಟಿ ಸೌಲಭ್ಯಗಳ ಅಗತ್ಯತೆಯ ಬಗ್ಗೆ ಬಿಎಸ್ಎನ್ಎಲ್ ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಂಗ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅದು ಉಲ್ಲೇಖಿಸಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ಇದನ್ನು ತುರ್ತಾಗಿ ಪರಿಶೀಲಿಸಲು ಹಾಗೂ ಜೂನ್ 10 ರಂದು ನಡೆಯುವ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಮಾಡಲು ಕೇಳಿದೆ.


ಓದಿ:  2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು, ಅವರು ಕ್ಲಿಕ್ಕಿಸಿದ ಫೋಟೋಗಳನ್ನು ವೀಕ್ಷಿಸಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...