Homeಮುಖಪುಟಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

ಜಮ್ಮುಕಾಶ್ಮೀರದ ನ್ಯಾಯಾಲಯಗಳಿಗೆ ’ಇ-ಸಂಪರ್ಕ’ ಅಳವಡಿಸುವಂತೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ನ್ಯಾಯಾಲಯಗಳಿಗೆ “ಇ-ಸಂಪರ್ಕ” ದ ಮಹತ್ವವನ್ನು ಜಮ್ಮು ಕಾಶ್ಮೀರ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ರಜನೇಶ್ ಓಸ್ವಾಲ್ ಅವರನ್ನೊಳಗೊಂಡ ನ್ಯಾಯಪೀಠ, “ನ್ಯಾಯಾಲಯಗಳಿಗೆ ಇ-ಸಂಪರ್ಕ ಲಭ್ಯತೆಯು ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವ ವಿಷಯವಾಗಿದೆ. ಇದು ಮೂಲಭೂತ ಹಕ್ಕು ಮತ್ತು ಅದನ್ನು ಯಾವುದೇ ರೀತಿಯಲ್ಲಿ ತಡೆಯಲು ಸಾಧ್ಯವಿಲ್ಲ. ”

“ಕೊರೊನಾ ಸಾಂಕ್ರಾಮಿಕ ಮತ್ತು ಅದರ ಪರಿಣಾಮವಾಗಿ ಉಂಟಾಗುವ ನಿರ್ಬಂಧಗಳ ಪ್ರಸ್ತುತ ಕಾಲದಲ್ಲಿ, ಇ-ಸಂಪರ್ಕದ ಲಭ್ಯತೆ ಇಲ್ಲದಿದ್ದರೆ ಯಾವುದೇ ನ್ಯಾಯಾಲಯವು ಅಗತ್ಯ ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅದು ಹೇಳಿದೆ.

ನ್ಯಾಯಾಲಯವು ಈಗ ಕೇಂದ್ರಾಡಳಿತ ಪ್ರದೇಶ ಆಗಿರುವ ಜಮ್ಮುಕಾಶ್ಮೀರದ ಲಾಕ್‌ಡೌನ್ ಪರಿಸ್ಥಿತಿಯ ಕುರಿತು ಹಲವಾರು ಅರ್ಜಿಗಳನ್ನು ಆಲಿಸುತ್ತಿತ್ತು. ವೈದ್ಯರಿಗೆ ಪಿಪಿಇಗಳನ್ನು ಪೂರೈಸುವುದು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ, ದಾರಿತಪ್ಪಿ ದನಕರುಗಳು ಹಾಗೂ ಪ್ರಾಣಿಗಳಿಂದ ಎದುರಿಸುತ್ತಿರುವ ತೊಂದರೆಗಳವರೆಗೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿತು.

ಉದಂಪೂರ್ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲು ಬಿಎಸ್ಎನ್ಎಲ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ

ವಿಚಾರಣೆ ನಂತರ, ಉದಂಪೂರ್‌ನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಇಂಟರ್ನೆಟ್ ಉಪಕರಣಗಳನ್ನು ಅಳವಡಿಸಲಾಗಿರುವ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಕಾರಣದಿಂದಾಗಿ ಉಪಕರಣಗಳು ಸುಟ್ಟುಹೋಗಿವೆ ಎಂದು ಆರಂಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದ್ದರೂ, ಐಟಿ ರಿಜಿಸ್ಟ್ರಾರ್ ಸಲ್ಲಿಸಿದ ವರದಿಯನ್ನು ನ್ಯಾಯಪೀಠ ಗಮನಕ್ಕೆ ತೆಗೆದುಕೊಂಡಿತು.

ಇದು ನ್ಯಾಯಾಲಯದ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಪ್ರಯತ್ನ ಎಂದು ಪ್ರತಿಪಾದಿಸಿದ ನ್ಯಾಯಪೀಠ, ಉಧಂಪುರ್ ನ್ಯಾಯಾಲಯದಲ್ಲಿ ಕನ್ವರ್ಟರ್‌ ಮತ್ತು ರೂಟರ್ ಅನ್ನು ಸ್ಥಾಪಿಸುವಂತೆ ಬಿಎಸ್ಎನ್ಎಲ್‌ಗೆ ನಿರ್ದೇಶನ ನೀಡಿತು. ಬಿಎಸ್ಎನ್ಎಲ್‌ನಿಂದ ಕೇಂದ್ರಾಡಳಿತದ ನ್ಯಾಯಾಲಯಗಳಿಗೆ ಇ-ಸಂಪರ್ಕವನ್ನು ಒದಗಿಸುವ ಸ್ಥಿತಿಯ ಬಗ್ಗೆ ಹೊಸ ವರದಿಯನ್ನು ಕೇಳಿದೆ.

10 ತಾಣಗಳಿಗೆ ವಿಎಸ್ಎಟಿ ಸೌಲಭ್ಯಗಳ ಅಗತ್ಯತೆಯ ಬಗ್ಗೆ ಬಿಎಸ್ಎನ್ಎಲ್ ಕಳೆದ ವರ್ಷ ನವೆಂಬರ್‌ನಲ್ಲಿ ನ್ಯಾಯಾಂಗ ಇಲಾಖೆಗೆ ಪತ್ರವನ್ನು ಕಳುಹಿಸಿದೆ ಎಂದು ಅದು ಉಲ್ಲೇಖಿಸಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆದ್ದರಿಂದ ನ್ಯಾಯಾಲಯವು ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿಗೆ ಇದನ್ನು ತುರ್ತಾಗಿ ಪರಿಶೀಲಿಸಲು ಹಾಗೂ ಜೂನ್ 10 ರಂದು ನಡೆಯುವ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಮಾಡಲು ಕೇಳಿದೆ.


ಓದಿ:  2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು, ಅವರು ಕ್ಲಿಕ್ಕಿಸಿದ ಫೋಟೋಗಳನ್ನು ವೀಕ್ಷಿಸಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...