Homeಮುಖಪುಟಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ವಿಡಿಯೊ ತಿರುಚಿ ಪೋಸ್ಟ್‌ ಮಾಡಿದ್ದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಪ್ರಕರಣ ದಾಖಲಿಸದಿರುವಾಗ ಆಮ್‌ಆದ್ಮಿ ಪಾರ್ಟಿಯ ಶಾಸಕಿ ಆತಿಶಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪಾತ್ರ ಅವರು ಜನವರಿ 30ರಂದು ವಿಡಿಯೊವನ್ನು ಪೋಸ್ಟ್‌ ಮಾಡಿ ನಂತರ ಡಿಲೀಟ್ ಮಾಡಿದ್ದರು.

ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮದ್‌ ಜುಭೈರ್‌‌ ಅವರು ಮಂಗಳವಾರ ಟ್ವೀಟ್ ಮಾಡಿ, ಸಂಬೀತ್‌ ಪಾತ್ರ ಅವರು ತಿರುಚಿದ ವಿಡಿಯೊದ ಅರ್ಕೈವ್‌ ಲಿಂಕ್‌ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್‌ ಮಾಡಿದ್ದ ‘ಆಲ್ಟ್‌ ನ್ಯೂಸ್‌’, ಸಂಬಿತ್ ವಿಡಿಯೊ ತಿರುಚಿದ್ದಾರೆ ಎಂಬದನ್ನು ಪತ್ತೆ ಹಚ್ಚಿತ್ತು. ಅರವಿಂದ ಕೇಜ್ರಿವಾಲ್‌ ಅವರು ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಿದ್ದರೂ, ವಿಡಿಯೊದ ತುಣುಕುಗಳನ್ನು ಕಟ್ ಮಾಡಿ ಪೋಣಿಸಿ, ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ಸಂಬಿತ್‌ ಬಿಂಬಿಸಿದ್ದರು.

“ಕೇಜ್ರಿವಾಲ್‌ ವಿರುದ್ಧ ಜನರನ್ನು ಎತ್ತಿಕಟ್ಟಲೆಂದು ಸಂಬಿತ್‌ ಯತ್ನಿಸಿದ್ದಾರೆ” ಎಂದು ಆತಿಶಿ ಆರೋಪಿಸಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದು ಅಪರಾಧ ಕೃತ್ಯವಾಗಿದ್ದು, ಪ್ರಕರಣ ದಾಖಲಿಸಬೇಕಾದದ್ದು ಪೊಲೀಸರ ಜವಾಬ್ದಾರಿ ಎಂದು ಅರ್ಜಿಯಲ್ಲಿ ಅವರು ಕೋರಿದ್ದರು.


ಇದನ್ನೂ ಓದಿರಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ


ಸಂಬಿತ್ ಪಾತ್ರ ಈ ಹಿಂದೆಯೂ ಸುಳ್ಳುಗಳನ್ನು ಹಬ್ಬಿಸಿ ಟೀಕೆಗೆ ಒಳಗಾಗಿದ್ದಾರೆ. ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಪ್ರಚಾರದಲ್ಲಿರುವ ವ್ಯಕ್ತಿಯಾಗಿದ್ದಾರೆ. ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದೆ. ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಟ್ವಿಟರ್ ಬಳಸುತ್ತಾರೆ. ಇವರು ಮಾಡಿದ್ದ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ. ಆದರೂ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿ ಸಂಬಿತ್‌ ಮುಂದುವರಿದಿದ್ದಾರೆ.


ಇದನ್ನೂ ಓದಿರಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...