Homeಮುಖಪುಟಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ವಿಡಿಯೊ ತಿರುಚಿ ಪೋಸ್ಟ್‌ ಮಾಡಿದ್ದ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರ ವಿರುದ್ಧ ಎಫ್‌ಐಆರ್‌‌ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಪ್ರಕರಣ ದಾಖಲಿಸದಿರುವಾಗ ಆಮ್‌ಆದ್ಮಿ ಪಾರ್ಟಿಯ ಶಾಸಕಿ ಆತಿಶಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಪಾತ್ರ ಅವರು ಜನವರಿ 30ರಂದು ವಿಡಿಯೊವನ್ನು ಪೋಸ್ಟ್‌ ಮಾಡಿ ನಂತರ ಡಿಲೀಟ್ ಮಾಡಿದ್ದರು.

ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮದ್‌ ಜುಭೈರ್‌‌ ಅವರು ಮಂಗಳವಾರ ಟ್ವೀಟ್ ಮಾಡಿ, ಸಂಬೀತ್‌ ಪಾತ್ರ ಅವರು ತಿರುಚಿದ ವಿಡಿಯೊದ ಅರ್ಕೈವ್‌ ಲಿಂಕ್‌ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್‌ ಮಾಡಿದ್ದ ‘ಆಲ್ಟ್‌ ನ್ಯೂಸ್‌’, ಸಂಬಿತ್ ವಿಡಿಯೊ ತಿರುಚಿದ್ದಾರೆ ಎಂಬದನ್ನು ಪತ್ತೆ ಹಚ್ಚಿತ್ತು. ಅರವಿಂದ ಕೇಜ್ರಿವಾಲ್‌ ಅವರು ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡಿದ್ದರೂ, ವಿಡಿಯೊದ ತುಣುಕುಗಳನ್ನು ಕಟ್ ಮಾಡಿ ಪೋಣಿಸಿ, ಕೇಜ್ರಿವಾಲ್‌ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ ಎಂದು ಸಂಬಿತ್‌ ಬಿಂಬಿಸಿದ್ದರು.

“ಕೇಜ್ರಿವಾಲ್‌ ವಿರುದ್ಧ ಜನರನ್ನು ಎತ್ತಿಕಟ್ಟಲೆಂದು ಸಂಬಿತ್‌ ಯತ್ನಿಸಿದ್ದಾರೆ” ಎಂದು ಆತಿಶಿ ಆರೋಪಿಸಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದು ಅಪರಾಧ ಕೃತ್ಯವಾಗಿದ್ದು, ಪ್ರಕರಣ ದಾಖಲಿಸಬೇಕಾದದ್ದು ಪೊಲೀಸರ ಜವಾಬ್ದಾರಿ ಎಂದು ಅರ್ಜಿಯಲ್ಲಿ ಅವರು ಕೋರಿದ್ದರು.


ಇದನ್ನೂ ಓದಿರಿ: ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ


ಸಂಬಿತ್ ಪಾತ್ರ ಈ ಹಿಂದೆಯೂ ಸುಳ್ಳುಗಳನ್ನು ಹಬ್ಬಿಸಿ ಟೀಕೆಗೆ ಒಳಗಾಗಿದ್ದಾರೆ. ಎಐಸಿಸಿ (ಕಾಂಗ್ರೆಸ್) ಸಂಶೋಧನಾ ವಿಭಾಗದ ನಕಲಿ ಲೆಟರ್‌ಹೆಡ್ ಬಳಸಿ, “ಸುಳ್ಳು ಮತ್ತು ಕಲ್ಪಿತ” ವಿಷಯವನ್ನು ಮುದ್ರಿಸಿ ಅಪಪ್ರಚಾರ ಮಾಡಿದ ಆರೋಪದ ಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಛತ್ತೀಸಘಡದಲ್ಲಿ ಎಫ್‌ಐಆರ್ ದಾಖಲಾಗಿತ್ತು.

ವೃತ್ತಿಯಲ್ಲಿ ವೈದ್ಯರಾದ ಸಂಬಿತ್ ಪಾತ್ರಾ ಬಿಜೆಪಿಯ ರಾಷ್ಟ್ರೀಯ ವಕ್ತಾರರ ಪೈಕಿ ಹೆಚ್ಚು ಪ್ರಚಾರದಲ್ಲಿರುವ ವ್ಯಕ್ತಿಯಾಗಿದ್ದಾರೆ. ರಾಷ್ಟ್ರೀಯ ಚಾನೆಲ್‌ಗಳ ಚರ್ಚೆಗಳಲ್ಲಿ ಪಕ್ಷದ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಅವರು, ಪ್ರತಿಪಕ್ಷಗಳ ವಿರುದ್ಧ ಅದರಲ್ಲೂ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಲು ಕೆಲವೊಮ್ಮೆ ಸತ್ಯ, ಬಹುಪಾಲು ಸಂದರ್ಭಗಳಲ್ಲಿ ಅರೆಸತ್ಯ, ಸುಳ್ಳು ಮತ್ತು ತಿರುಚಲ್ಪಟ್ಟ ಸಂಗತಿಗಳನ್ನು ತಮ್ಮ ಅಸ್ತ್ರಗಳನ್ನಾಗಿ ಬಳಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ ಟ್ವಿಟರ್ ಅವರ ನೆಚ್ಚಿನ ವೇದಿಕೆಯಾಗಿದೆ. ಅವರು ನಾಲ್ಕು ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲು ಅವರು ಟ್ವಿಟರ್ ಬಳಸುತ್ತಾರೆ. ಇವರು ಮಾಡಿದ್ದ ಟೂಲ್‌ಕಿಟ್ ಟ್ವೀಟ್‌ಗೆ ಟ್ವಿಟರ್ ಕಂಪನಿ ’ತಿರುಚಲ್ಪಟ್ಟ ಸಂಗತಿ’ (’ಮ್ಯಾನಿಪುಲೆಟೆಡ್ ಮೀಡಿಯಾ’) ಎಂಬ ಟ್ಯಾಗ್ ಹಾಕಿತ್ತು. ಅವರು ರಾಷ್ಟ್ರೀಯ ಚಾನೆಲ್‌ಗಳಲ್ಲಿ ತಪ್ಪು ಮಾಹಿತಿಯನ್ನು ಉತ್ತೇಜಿಸುತ್ತಿದ್ದಾರೆ, ಟ್ವೀಟ್‌ಗಳಲ್ಲಿ ತಿರುಚಿದ ವಿಡಿಯೋ-ಮಾಹಿತಿ ಹಾಕುತ್ತಾರೆ ಎಂದು ಹಲವಾರು ಫ್ಯಾಕ್ಟ್‌ಚೆಕ್‌ಗಳು ಹಲವಾರು ಸಲ ನಿರೂಪಿಸಿವೆ. ಆದರೂ ಬಿಜೆಪಿಯ ಜವಾಬ್ದಾರಿಯುತ ಸ್ಥಾನದಲ್ಲಿ ಸಂಬಿತ್‌ ಮುಂದುವರಿದಿದ್ದಾರೆ.


ಇದನ್ನೂ ಓದಿರಿ: ರೈತರ ಕುರಿತು ಅವಹೇಳನಕಾರಿ ಪೋಸ್ಟ್: ಮುಂಬೈನಲ್ಲಿ ಕಂಗನಾ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...