Homeಕರ್ನಾಟಕಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

2021ರಲ್ಲಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ 13 ರೂಪಾಯಿಗೆ ಸಿಗುತ್ತಿದ್ದ ಬಟ್ಟೆ ಚೀಲವನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ (ಕೆಎಚ್‌ಡಿಸಿ) ಪ್ರತಿ ಚೀಲಕ್ಕೆ 52 ರೂಪಾಯಿ ನೀಡಿ ಖರೀದಿಸಲು ರೋಹಿಣಿ ಸಿಂಧೂರಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಸರ್ಕಾರದ ಖಜಾನೆಗೆ ಒಟ್ಟು 5.88 ಕೋಟಿ ರೂಪಾಯಿಗಳ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪವಿದೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, “ಇಲಾಖಾ ವಿಚಾರಣೆಯಲ್ಲಿ ಅಧಿಕಾರಿಯನ್ನು ದೋಷಮುಕ್ತಗೊಳಿಸಿದ ಮಾತ್ರಕ್ಕೆ, ಅದೇ ಸತ್ಯಾಂಶಗಳ ಆಧಾರದ ಮೇಲೆ ಕ್ರಿಮಿನಲ್ ತನಿಖೆಯನ್ನು ಪ್ರಾರಂಭಿಸುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಹೇಳಿದ್ದಾರೆ.

“ದಾಖಲಾದ ದೂರು ಅಸ್ಪಷ್ಟವಾಗಲಿ ಅಥವಾ ಕೇವಲ ಊಹಾಪೋಹದಿಂದ ಕೂಡಿದ್ದಾಗಲಿ ಆಗಿರಲಿಲ್ಲ. ಅದು ಸ್ಪಷ್ಟತೆ ಮತ್ತು ದಾಖಲೆಗಳ ಬೆಂಬಲದೊಂದಿಗೆ, ಮೇಲ್ನೋಟಕ್ಕೆ ಅಧಿಕಾರ ದುರುಪಯೋಗ ಮತ್ತು ರಾಜ್ಯಕ್ಕೆ ಹಣಕಾಸಿನ ನಷ್ಟ ಉಂಟಾಗಿರುವುದನ್ನು ಬಹಿರಂಗಪಡಿಸುವ ಆರೋಪವನ್ನು ಒಳಗೊಂಡಿತ್ತು. ಇಂತಹ ಮಾಹಿತಿಯು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ತನಿಖೆ ಆರಂಭಿಸಲು ಅನುಮೋದನೆ ನೀಡಲು ಅರ್ಹವಲ್ಲದಿದ್ದರೆ, ಬೇರೆ ಯಾವುದು ಅರ್ಹವಾಗುತ್ತದೆ ಎಂದು ಯೋಚಿಸಲು ಈ ನ್ಯಾಯಾಲಯವು ಬದ್ಧವಾಗಿದೆ. ಸೆಕ್ಷನ್ 17ಎ ಅಡಿಯಲ್ಲಿನ ಶಾಸನಬದ್ಧ ರಕ್ಷಣೆಯು ಭ್ರಷ್ಟಾಚಾರದ ಗಂಭೀರ ಆರೋಪಗಳ ಬಗ್ಗೆ ನಡೆಯುವ ಕಾನೂನುಬದ್ಧ ವಿಚಾರಣೆಯನ್ನು ಹತ್ತಿಕ್ಕಲು ಉದ್ದೇಶಿಸಿಲ್ಲ; ಇದನ್ನು ಕ್ಷುಲ್ಲಕ ಕಿರುಕುಳವನ್ನು ತಡೆಯಲು ವಿನ್ಯಾಸಗೊಳಿಸಲಾಗಿದೆಯೇ ಹೊರತು, ಹೊಣೆಗಾರಿಕೆಯನ್ನು ತಡೆಯಲು ಅಲ್ಲ” ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

ಅಧಿಕಾರಿಯೊಬ್ಬರು ತನ್ನ ಅಧಿಕೃತ ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸಂಬಂಧಿಸಿದ ಆರೋಪಗಳಿದ್ದಾಗ, ಎಫ್‌ಐಆರ್ ದಾಖಲಿಸಲು ಭ್ರಷ್ಟಾಚಾರ ತಡೆ ಕಾಯ್ದೆ, 1988ರ ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಮೈಸೂರಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಸಲ್ಲಿಸಿದ್ದ ದೂರಿನಲ್ಲಿ, ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಎನ್. ಆರ್ ರವಿಚಂದ್ರೇಗೌಡ ಅವರು, ಬಟ್ಟೆ ಚೀಲಗಳನ್ನು ಕೆಎಚ್‌ಡಿಸಿಯಿಂದ ತಲಾ 52 ರೂಪಾಯಿಗೆ ಖರೀದಿಸಲಾಗಿತ್ತು. ಆದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಅವು ಕೇವಲ 13 ರೂಪಾಯಿಗೆ ಮಾರಾಟವಾಗುತ್ತಿದ್ದವು ಎಂದು ತಿಳಿಸಿದ್ದರು. ಇದರ ಪರಿಣಾಮವಾಗಿ ಸರ್ಕಾರಿ ಖಜಾನೆಗೆ 5.88 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅವರು ಆರೋಪಿಸಿದ್ದರು.

ಮುಂದುವರಿದು, ಗ್ರಾಮ ಪಂಚಾಯತಿಗಳಲ್ಲಿ ಬಡವರಿಗಾಗಿ ಮೀಸಲಿಟ್ಟಿದ್ದ ಕ್ಷೇಮಾಭಿವೃದ್ಧಿ ಯೋಜನೆಗಳ ಹಣವನ್ನು ಈ ಚೀಲಗಳ ಖರೀದಿಗೆ ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದರು.

ಈ ಕುರಿತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಎಸಿಬಿಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸರ್ಕಾರದ ಅನುಮತಿಯನ್ನು ಕೋರಲಾಗಿತ್ತು. ಆದರೆ, 2022ರ ಸೆಪ್ಟೆಂಬರ್ 19ರಂದು ಸರ್ಕಾರ ಈ ಮನವಿಯನ್ನು ತಿರಸ್ಕರಿಸಿತ್ತು. ದೂರುದಾರರು ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಪೀಠ, 2025ರ ಫೆಬ್ರವರಿಯಲ್ಲಿ ಈ ವಿಷಯವನ್ನು ಮರುಪರಿಶೀಲಿಸುವಂತೆ ಮತ್ತು ಕಾನೂನಿನ ಪ್ರಕಾರ ಹೊಸದಾಗಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಹಾಗಿದ್ದರೂ, ಸರ್ಕಾರವು 2025ರ ಮೇ 26ರಂದು ಮತ್ತೆ ಅನುಮತಿಯನ್ನು ನಿರಾಕರಿಸಿತ್ತು. ವಿಶೇಷವೆಂದರೆ, ಅಧಿಕಾರಿಯನ್ನು ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ, ಈ ಹೊಸ ಆದೇಶವು ಹಳೆಯ ಆದೇಶದಂತೆಯೇ ಅಕ್ಷರಶಃ ಇತ್ತು. ಇದನ್ನು ಗಮನಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಮೇಲ್ನೋಟಕ್ಕೆ ಭ್ರಷ್ಟಾಚಾರದ ಅಂಶಗಳನ್ನು ಹೊಂದಿರುವ ದೂರಿನ ಮೇಲೆ ತನಿಖೆಗೆ ಅನುಮತಿ ಕೋರಲಾಗಿದೆ ಎಂದು ಉಲ್ಲೇಖಿಸಿದ್ದರು.

“ಪ್ರಸ್ತುತ ವ್ಯಾಜ್ಯದಲ್ಲಿ ಪರಿಗಣನೆಗೆ ಬಂದಿರುವ ವಿವಾದವು ಸಾರ್ವಜನಿಕ ಪ್ರಾಮಾಣಿಕತೆಯ ಬುಡಕ್ಕೇ ಕೈಹಾಕುವಂತದ್ದಾಗಿದೆ. ಇದು ಭ್ರಷ್ಟಾಚಾರದ ಆರೋಪಗಳು ಮತ್ತು ಅದರ ಪರಿಣಾಮವಾಗಿ ಸರ್ಕಾರಿ ಖಜಾನೆಗೆ ಉಂಟಾದ ನಷ್ಟಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ ಬಿಂಬಿತವಾಗಿರುವುದು ಕೇವಲ ಆಡಳಿತಾತ್ಮಕ ಲೋಪವಲ್ಲ, ಬದಲಿಗೆ ಸಾರ್ವಜನಿಕ ನಿಧಿಗೆ ಗಂಭೀರ ಆರ್ಥಿಕ ಹಾನಿ ಉಂಟುಮಾಡಿದ ನಿರ್ಧಾರವಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಕೇವಲ 13 ರೂಪಾಯಿಗೆ ಲಭ್ಯವಿರುವ ಬಟ್ಟೆ ಚೀಲವನ್ನು, ಜಿಲ್ಲಾಧಿಕಾರಿಯ ನಿರ್ಧಾರದಂತೆ ತಲಾ 52 ರೂಪಾಯಿಯಂತೆ ಹೆಚ್ಚಿನ ದರದಲ್ಲಿ ಖರೀದಿಸಲು ಪ್ರಯತ್ನಿಸಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅಭಿಪ್ರಾಯಪಟ್ಟಿದ್ದಾರೆ.

“ಇಲಾಖಾ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳು ವಿಭಿನ್ನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತವೆ ಹಾಗೂ ಅವುಗಳು ಸಾಕ್ಷ್ಯಾಧಾರಗಳ ವಿಭಿನ್ನ ಮಾನದಂಡಗಳು ಮತ್ತು ಉದ್ದೇಶಗಳಿಂದ ನಿಯಂತ್ರಿಸಲ್ಪಡುತ್ತವೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಈ ವಿಷಯವನ್ನು ಮತ್ತೊಮ್ಮೆ ಮರುಪರಿಶೀಲನೆಗೆ ಕಳುಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಮತ್ತು ಇದು ನ್ಯಾಯದ ಹಿತದೃಷ್ಟಿಯಿಂದ ಪ್ರಕ್ರಿಯೆಯನ್ನು ಮತ್ತಷ್ಟು ವಿಳಂಬಗೊಳಿಸುತ್ತದೆ” ಎಂದಿದೆ.

ವರದಿಗಳ ಸಾಮಾನ್ಯವಾಗಿ, ಹೊಸದಾಗಿ ಪರಿಶೀಲಿಸಲು ಈ ವಿಷಯವನ್ನು ಸರ್ಕಾರಕ್ಕೆ ಮರಳಿ ಕಳುಹಿಸುವುದು ಸೂಕ್ತವೆಂದು ನ್ಯಾಯಾಲಯ ಭಾವಿಸುತ್ತಿತ್ತು. ಆದರೆ, ಈ ಪ್ರಕರಣದ ವಿಶೇಷ ಸನ್ನಿವೇಶಗಳಲ್ಲಿ ಅಂತಹ ಕ್ರಮವು ಅನಗತ್ಯ ಮತ್ತು ಅಸಮರ್ಥನೀಯವಾಗಿದೆ” ಎಂದು ತಿಳಿಸಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...