Homeಮುಖಪುಟಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ರಾಜ್ಯದಾದ್ಯಂತ ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ರಚನೆಗಳನ್ನು ತೆಗೆದುಹಾಕಲು ಆದೇಶಿಸಿದ್ದು, ಇಂತಹ ಅನಧಿಕೃತ ನಿರ್ಮಾಣಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದು ಹೇಳಿದೆ.

ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಕೆಡವುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  ಈ ಕುರಿತು ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿ ಪಿ.ವಿ.ಕುಂಞಕೃಷ್ಣನ್, ಈ ಕುರಿತು ಕೈಗೊಂಡ ಕ್ರಮಗಳ ಕುರಿತು ಒಂದು ವರ್ಷದೊಳಗೆ ಹೈಕೋಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮವನ್ನು ತೆರವು ಪ್ರಕ್ರಿಯೆಯಲ್ಲಿ ಪರಿಗಣಿಸಬಾರದು. ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳಿಗೆ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಭಕ್ತರು ಸರ್ಕಾರಿ ಭೂಮಿಯನ್ನು ಅತಿಕ್ರಮಿಸಬೇಕಾಗಿಲ್ಲ. ಅದನ್ನು ಭೂರಹಿತರಿಗೆ ಹಂಚಲಿ, ಇದರಿಂದ ದೇವರು ಹೆಚ್ಚು ಸಂತೋಷ ಪಡುತ್ತಾನೆ ಮತ್ತು ಆಶೀರ್ವಾದವನ್ನು ನೀಡುತ್ತಾನೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಸರ್ಕಾರಿ ಭೂಮಿಯಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳು ಅಥವಾ ಇತರ ರಚನೆಗಳು ಅಸ್ತಿತ್ವದಲ್ಲಿವೆಯೇ ಎಂಬುದನ್ನು ತಹಸೀಲ್ದಾರ್ ಮತ್ತು ಗ್ರಾಮಾಧಿಕಾರಿಗಳ ಮೂಲಕ ತನಿಖೆ ಮಾಡಲು ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕು. ಅನಧಿಕೃತ ಕಟ್ಟಡಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೂ ತರಬಹುದು. ಜಿಲ್ಲಾಧಿಕಾರಿ ಆರು ತಿಂಗಳೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಬೇಕು. ಅಕ್ರಮ ಕಟ್ಟಡಗಳು ಕಂಡು ಬಂದರೆ ಆರು ತಿಂಗಳೊಳಗೆ ಪೊಲೀಸರ ನೆರವಿನಿಂದ ಅದನ್ನು ನೆಲಸಮ ಮಾಡಬೇಕು ಎಂದು ಹೈಕೋರ್ಟ್‌ ತೀರ್ಪಿನ ವೇಳೆ ಹೇಳಿದೆ.

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್ ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ಈ ಆದೇಶವನ್ನು ನೀಡಿದೆ. ದೀರ್ಘಾವಧಿಯ ಲೀಸ್‌ನಲ್ಲಿ ನೀಡಲಾದ ತನ್ನ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಿ ಸರ್ಕಾರಿ ಭೂಮಿಯನ್ನು ರಕ್ಷಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ಪಥನಂತಿಟ್ಟದಲ್ಲಿರುವ ಚಂದನಪಲ್ಲಿ ಎಸ್ಟೇಟ್‌ನ ಸಿ ವಿಭಾಗದಲ್ಲಿ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳ ನಿರ್ಮಾಣದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಅತಿಕ್ರಮಣದಾರರನ್ನು ತೆರವು ಮಾಡುವಂತೆ ಹಾಗೂ ಆಸ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ಆರು ತಿಂಗಳೊಳಗೆ ತೆರವುಗೊಳಿಸುವಂತೆ ಪತ್ತನಂತಿಟ್ಟ ಜಿಲ್ಲಾಧಿಕಾರಿ, ಡಿಜಿಪಿ, ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಅಡೂರು ಆರ್‌ಡಿಒ, ಕೊನ್ನಿ ವಿಭಾಗೀಯ ಅರಣ್ಯಾಧಿಕಾರಿಗೆ ನಿರ್ದೇಶನವನ್ನು ನೀಡಿದೆ.

ಇದನ್ನು ಓದಿ: ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ವಿವೇಕಾನಂದ ಸ್ಮಾರಕಕ್ಕೆ ತೆರಳದಂತೆ ಪ್ರವಾಸಿಗಳಿಗೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...