Homeಮುಖಪುಟಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ರಾಜ್ಯದಾದ್ಯಂತ ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ರಚನೆಗಳನ್ನು ತೆಗೆದುಹಾಕಲು ಆದೇಶಿಸಿದ್ದು, ಇಂತಹ ಅನಧಿಕೃತ ನಿರ್ಮಾಣಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದು ಹೇಳಿದೆ.

ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಕೆಡವುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  ಈ ಕುರಿತು ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿ ಪಿ.ವಿ.ಕುಂಞಕೃಷ್ಣನ್, ಈ ಕುರಿತು ಕೈಗೊಂಡ ಕ್ರಮಗಳ ಕುರಿತು ಒಂದು ವರ್ಷದೊಳಗೆ ಹೈಕೋಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮವನ್ನು ತೆರವು ಪ್ರಕ್ರಿಯೆಯಲ್ಲಿ ಪರಿಗಣಿಸಬಾರದು. ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳಿಗೆ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಭಕ್ತರು ಸರ್ಕಾರಿ ಭೂಮಿಯನ್ನು ಅತಿಕ್ರಮಿಸಬೇಕಾಗಿಲ್ಲ. ಅದನ್ನು ಭೂರಹಿತರಿಗೆ ಹಂಚಲಿ, ಇದರಿಂದ ದೇವರು ಹೆಚ್ಚು ಸಂತೋಷ ಪಡುತ್ತಾನೆ ಮತ್ತು ಆಶೀರ್ವಾದವನ್ನು ನೀಡುತ್ತಾನೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಸರ್ಕಾರಿ ಭೂಮಿಯಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳು ಅಥವಾ ಇತರ ರಚನೆಗಳು ಅಸ್ತಿತ್ವದಲ್ಲಿವೆಯೇ ಎಂಬುದನ್ನು ತಹಸೀಲ್ದಾರ್ ಮತ್ತು ಗ್ರಾಮಾಧಿಕಾರಿಗಳ ಮೂಲಕ ತನಿಖೆ ಮಾಡಲು ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕು. ಅನಧಿಕೃತ ಕಟ್ಟಡಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೂ ತರಬಹುದು. ಜಿಲ್ಲಾಧಿಕಾರಿ ಆರು ತಿಂಗಳೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಬೇಕು. ಅಕ್ರಮ ಕಟ್ಟಡಗಳು ಕಂಡು ಬಂದರೆ ಆರು ತಿಂಗಳೊಳಗೆ ಪೊಲೀಸರ ನೆರವಿನಿಂದ ಅದನ್ನು ನೆಲಸಮ ಮಾಡಬೇಕು ಎಂದು ಹೈಕೋರ್ಟ್‌ ತೀರ್ಪಿನ ವೇಳೆ ಹೇಳಿದೆ.

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್ ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ಈ ಆದೇಶವನ್ನು ನೀಡಿದೆ. ದೀರ್ಘಾವಧಿಯ ಲೀಸ್‌ನಲ್ಲಿ ನೀಡಲಾದ ತನ್ನ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಿ ಸರ್ಕಾರಿ ಭೂಮಿಯನ್ನು ರಕ್ಷಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ಪಥನಂತಿಟ್ಟದಲ್ಲಿರುವ ಚಂದನಪಲ್ಲಿ ಎಸ್ಟೇಟ್‌ನ ಸಿ ವಿಭಾಗದಲ್ಲಿ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳ ನಿರ್ಮಾಣದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಅತಿಕ್ರಮಣದಾರರನ್ನು ತೆರವು ಮಾಡುವಂತೆ ಹಾಗೂ ಆಸ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ಆರು ತಿಂಗಳೊಳಗೆ ತೆರವುಗೊಳಿಸುವಂತೆ ಪತ್ತನಂತಿಟ್ಟ ಜಿಲ್ಲಾಧಿಕಾರಿ, ಡಿಜಿಪಿ, ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಅಡೂರು ಆರ್‌ಡಿಒ, ಕೊನ್ನಿ ವಿಭಾಗೀಯ ಅರಣ್ಯಾಧಿಕಾರಿಗೆ ನಿರ್ದೇಶನವನ್ನು ನೀಡಿದೆ.

ಇದನ್ನು ಓದಿ: ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ವಿವೇಕಾನಂದ ಸ್ಮಾರಕಕ್ಕೆ ತೆರಳದಂತೆ ಪ್ರವಾಸಿಗಳಿಗೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...