Homeಮುಖಪುಟಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ರಾಜ್ಯದಾದ್ಯಂತ ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ರಚನೆಗಳನ್ನು ತೆಗೆದುಹಾಕಲು ಆದೇಶಿಸಿದ್ದು, ಇಂತಹ ಅನಧಿಕೃತ ನಿರ್ಮಾಣಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದು ಹೇಳಿದೆ.

ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಕೆಡವುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  ಈ ಕುರಿತು ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿ ಪಿ.ವಿ.ಕುಂಞಕೃಷ್ಣನ್, ಈ ಕುರಿತು ಕೈಗೊಂಡ ಕ್ರಮಗಳ ಕುರಿತು ಒಂದು ವರ್ಷದೊಳಗೆ ಹೈಕೋಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮವನ್ನು ತೆರವು ಪ್ರಕ್ರಿಯೆಯಲ್ಲಿ ಪರಿಗಣಿಸಬಾರದು. ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳಿಗೆ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಭಕ್ತರು ಸರ್ಕಾರಿ ಭೂಮಿಯನ್ನು ಅತಿಕ್ರಮಿಸಬೇಕಾಗಿಲ್ಲ. ಅದನ್ನು ಭೂರಹಿತರಿಗೆ ಹಂಚಲಿ, ಇದರಿಂದ ದೇವರು ಹೆಚ್ಚು ಸಂತೋಷ ಪಡುತ್ತಾನೆ ಮತ್ತು ಆಶೀರ್ವಾದವನ್ನು ನೀಡುತ್ತಾನೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಸರ್ಕಾರಿ ಭೂಮಿಯಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳು ಅಥವಾ ಇತರ ರಚನೆಗಳು ಅಸ್ತಿತ್ವದಲ್ಲಿವೆಯೇ ಎಂಬುದನ್ನು ತಹಸೀಲ್ದಾರ್ ಮತ್ತು ಗ್ರಾಮಾಧಿಕಾರಿಗಳ ಮೂಲಕ ತನಿಖೆ ಮಾಡಲು ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕು. ಅನಧಿಕೃತ ಕಟ್ಟಡಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೂ ತರಬಹುದು. ಜಿಲ್ಲಾಧಿಕಾರಿ ಆರು ತಿಂಗಳೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಬೇಕು. ಅಕ್ರಮ ಕಟ್ಟಡಗಳು ಕಂಡು ಬಂದರೆ ಆರು ತಿಂಗಳೊಳಗೆ ಪೊಲೀಸರ ನೆರವಿನಿಂದ ಅದನ್ನು ನೆಲಸಮ ಮಾಡಬೇಕು ಎಂದು ಹೈಕೋರ್ಟ್‌ ತೀರ್ಪಿನ ವೇಳೆ ಹೇಳಿದೆ.

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್ ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ಈ ಆದೇಶವನ್ನು ನೀಡಿದೆ. ದೀರ್ಘಾವಧಿಯ ಲೀಸ್‌ನಲ್ಲಿ ನೀಡಲಾದ ತನ್ನ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಿ ಸರ್ಕಾರಿ ಭೂಮಿಯನ್ನು ರಕ್ಷಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ಪಥನಂತಿಟ್ಟದಲ್ಲಿರುವ ಚಂದನಪಲ್ಲಿ ಎಸ್ಟೇಟ್‌ನ ಸಿ ವಿಭಾಗದಲ್ಲಿ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳ ನಿರ್ಮಾಣದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಅತಿಕ್ರಮಣದಾರರನ್ನು ತೆರವು ಮಾಡುವಂತೆ ಹಾಗೂ ಆಸ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ಆರು ತಿಂಗಳೊಳಗೆ ತೆರವುಗೊಳಿಸುವಂತೆ ಪತ್ತನಂತಿಟ್ಟ ಜಿಲ್ಲಾಧಿಕಾರಿ, ಡಿಜಿಪಿ, ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಅಡೂರು ಆರ್‌ಡಿಒ, ಕೊನ್ನಿ ವಿಭಾಗೀಯ ಅರಣ್ಯಾಧಿಕಾರಿಗೆ ನಿರ್ದೇಶನವನ್ನು ನೀಡಿದೆ.

ಇದನ್ನು ಓದಿ: ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ವಿವೇಕಾನಂದ ಸ್ಮಾರಕಕ್ಕೆ ತೆರಳದಂತೆ ಪ್ರವಾಸಿಗಳಿಗೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...