Homeಕರ್ನಾಟಕದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಸೆಪ್ಟೆಂಬರ್ 22ರಂದು ಪ್ರಾರಂಭವಾಗುವ ಮೈಸೂರು ದಸರಾ ಉತ್ಸವ-2025 ಅನ್ನು ಉದ್ಘಾಟಿಸಲು ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಮತ್ತು ಹೋರಾಟಗಾರ್ತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 15ರಂದು ನಿರಾಕರಿಸಿದೆ.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರಿನ ನಿವಾಸಿಗಳಾದ ಗಿರೀಶ್ ಕುಮಾರ್ ಟಿ, ಸೌಮ್ಯ ಆರ್. ಮತ್ತು ಎಚ್.ಎಸ್. ಗೌರವ್ ಎಂಬವರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠ ಆದೇಶ ನೀಡಿದೆ.

“ವಿಭಿನ್ನ ನಂಬಿಕೆಯ ವ್ಯಕ್ತಿಗೆ ಆಹ್ವಾನ ನೀಡುವುದು ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ವಾದಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯ ಪೀಠ ಹೇಳಿದೆ. 

2023ರಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಬಾನು ಮುಷ್ತಾಕ್ ಅವರು ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ಅಲ್ಲದೆ, ಮೈಸೂರು ರಾಜಮನೆತನದ ಪ್ರತಿನಿಧಿಗಳ ಜೊತೆ ಚರ್ಚಿಸದೆ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ ಎಂದು ಪ್ರತಾಪ್ ಸಿಂಹ ತನ್ನ ಅರ್ಜಿಯಲ್ಲಿ ವಾದಿಸಿದ್ದರು.

“ಕನ್ನಡವನ್ನು ಭಾಷೆಯಾಗಿ ಬಳಸುವ ಬದಲು ಭಾವುಕವಾಗಿ ಬಳಸುತ್ತಿದ್ದೀರಿ. ದೇವತೆಯನ್ನಾಗಿ ಮಾಡಿ, ಮಂದಹಾಸದಲ್ಲಿದ್ದಾಗ ಅದಕ್ಕೆ ಕೈ ಮುಗಿದು ಬಂದರೆ ನಮ್ಮ ಕೆಲಸ ಮುಗಿಯಿತು ಎಂಬ ಭಾವನೆಯಲ್ಲಿ ಇದ್ದೀರಿ. ಭಾಷೆಯನ್ನು ಭಾಷೆಯಾಗಿ ಪರಿಗಣಿಸಿದಾಗ ನಾನೂ ಓದಬೇಕಾಗುತ್ತದೆ, ನೀವು ಓದಬೇಕಾಗುತ್ತದೆ. ನಮ್ಮ ಮಕ್ಕಳು ಕೂಡ ಓದಬೇಕಾಗುತ್ತದೆ. ಪ್ರತಿಯೊಬ್ಬರು ಓದಬೇಕಾಗುತ್ತದೆ” ಎಂದು 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ಹೇಳಿದ್ದರು.

ಇತ್ತೀಚೆಗೆ ಅವರನ್ನು ದಸರಾ ಉದ್ಘಾಟನೆಗೆ ಸರ್ಕಾರ ಆಯ್ಕೆ ಮಾಡಿದ ಬಳಿಕ ಹಳೆಯ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಕುರಿತು ಆಗಸ್ಟ್‌ 26ರಂದು ಪ್ರತಿಕ್ರಿಯೆ ನೀಡಿದ್ದ ಬಾನು ಮುಷ್ತಾಕ್ ಅವರು, “ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಸಾಹಿತಿಗಳನ್ನು ದೂರ ಇಟ್ಟಿದ್ದಕ್ಕೆ ಪ್ರತಿರೋಧವಾಗಿ ಜನ ಸಾಹಿತ್ಯ ಸಮ್ಮೇಳನ ಮಾಡಲಾಗಿತ್ತು. ಆ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ನಾನು ಮಹಿಳೆಯರು, ಅಲ್ಪ ಸಂಖ್ಯಾತರು ಮತ್ತು ತುಳಿತಕ್ಕೊಳಗಾದವರ ಪರ ಮಾತನಾಡಿದ್ದೆ” ಎಂದು ಸ್ಪಷ್ಟಪಡಿಸಿದ್ದರು.

ಬಾನು ಮುಷ್ತಾಕ್ ಅವರ ಜನ ಸಾಹಿತ್ಯ ಸಮ್ಮೇಳನದ ಭಾಷಣವನ್ನು ಪ್ರತಾಪ್ ಸಿಂಹ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

“ಬಾನು ಮುಷ್ತಾಕ್ ಹೇಳಿಕೆಯು ಹಿಂದೂ ದೇವತೆಯನ್ನು ಪೂಜಿಸುವುದರಲ್ಲಿ ಅವರಿಗೆ ನಂಬಿಕೆ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸುತ್ತದೆ. ಅವರು ತಮ್ಮ ಹಿಂದೂ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆಗಳನ್ನು ಹಿಂತೆಗೆದುಕೊಂಡರೆ ದಸರಾ ಉದ್ಘಾಟನೆಗೆ ಆಹ್ವಾನಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ” ಎಂದಿದ್ದರು.

“ಹಿಂದೂ ದೇವತೆಯನ್ನು ಪೂಜಿಸುವುದರಲ್ಲಿ ನಂಬಿಕೆ ಇಲ್ಲದ ವ್ಯಕ್ತಿಯನ್ನು ರಾಜ್ಯ ಸರ್ಕಾರವು ಹಿಂದೂ ಆಚರಣೆಗಳ ಪ್ರಕಾರ ದೇವತೆಯನ್ನು ಪೂಜಿಸುವ ಮೂಲಕ ಪ್ರಾರಂಭವಾಗುವ ದಸರಾ ಉತ್ಸವ ಉದ್ಘಾಟಿಸಲು ಆಹ್ವಾನಿಸಲು ಹೇಗೆ ಸಾಧ್ಯ?” ಎಂದು ಪ್ರತಾಪ್ ಸಿಂಹ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಮತ್ತೊಂದೆಡೆ, ರಾಜ್ಯ ಅಡ್ವೊಕೇಟ್ ಜನರಲ್ (ಎಜಿ) ಶಶಿ ಕಿರಣ್ ಶೆಟ್ಟಿ ಅವರು ಪ್ರತಾಪ್ ಸಿಂಹ ಅವರು ಸಂಸತ್ ಸದಸ್ಯರಾಗಿದ್ದಾಗ, 2017ರಲ್ಲಿ ದಸರಾ ಉತ್ಸವವನ್ನು ಉದ್ಘಾಟಿಸಿದ ಕವಿ ನಿಸಾರ್ ಅಹ್ಮದ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಮುಜರಾಯಿ ಇಲಾಖೆ ಅಡಿ ಬರುವ ದೇವಾಲಯವಾಗಲಿ ಅಥವಾ ಖಾಸಗಿ ದೇವಾಲಯವಾಗಲಿ, ಅವುಗಳಿಗೆ ಜಾತಿ, ಧರ್ಮ ಬೇಧವಿಲ್ಲದೆ ಯಾರು ಬೇಕಾದರು ಪ್ರವೇಶಿಸಬಹುದು. ಅದನ್ನು ತಡೆಯಬಾರದು ಎಂದು ರಾಜ್ಯ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ ಎಜಿ, ಮೈಸೂರಿನಲ್ಲಿ ದಸರಾ ಉತ್ಸವವನ್ನು ಆಯೋಜಿಸುವಲ್ಲಿ ಸರ್ಕಾರ ತನ್ನ ಜಾತ್ಯತೀತ ಕರ್ತವ್ಯವನ್ನು ನಿರ್ವಹಿಸುತ್ತಿದೆ ಎಂದು ಹೇಳಿದ್ದರು.

ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದಕ್ಕೆ ಕೋಮುವಾದಿಗಳಿಂದ ವಿರೋಧ: ಬಾನು ಮುಷ್ತಾಕ್ ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...