Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಜುಬೇರ್‌ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರು.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದ್ದು, ದೆಹಲಿ ಹೈಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಉಪ ಆಯುಕ್ತ ಸೈಬರ್ ಸೆಲ್‌ಗೆ 8 ವಾರಗಳಲ್ಲಿ ಈ ಪ್ರಕರಣದಲ್ಲಿ ನಡೆಸಿದ ತನಿಖೆಯ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಮೊಹಮ್ಮದ್ ಜುಬೈರ್ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಜುಬೇರ್‌ ಪರವಾಗಿ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, “ಅರ್ಜಿದಾರರು ಸಮರ್ಪಿತ ಪ್ರಜೆಯಾಗಿದ್ದು, ಆಲ್ಟ್‌‌ನ್ಯೂಸ್‌ನ ಸಹಸಂಸ್ಥಾಪಕರಾಗಿದ್ದಾರೆ. ಅವರು ತಮ್ಮ ಸುದ್ದಿವಾಹಿನಿಯ ಮೂಲಕ ಯಾವುದೇ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ಪಕ್ಷಪಾತವಿಲ್ಲದೆ ತಪ್ಪು ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ. ಇದಕ್ಕಾಗಿ ಅವರ ಮೇಲೆ ರಾಜಕೀಯ ವ್ಯಕ್ತಿ ಹಾಗೂ ಪಕ್ಷಗಳ ಅಂಧ ಅಭಿಮಾನಿಗಳು ನಿಂದನೆ, ಬೆದರಿಕೆ ಹಾಗೂ ಅವರೊಂದಿಗೆ ಹೀನಾಯವಾಗಿ ವರ್ತಿಸುತ್ತದೆ” ಎಂದು ವಾದಿಸಿದರು.

“ಪ್ರಸ್ತುತ ದೂರು ಸಲ್ಲಿಸಿದವರು ಗಂಭೀರ ಕಿರುಕುಳ ನೀಡುವವರಾಗಿದ್ದು, ಅವರು ಉದಾರವಾದಿ, ಪ್ರಗತಿಪರ ದೃಷ್ಟಿಕೋನಗಳಿರುವ ಹಾಗೂ ಸರ್ಕಾರದ ಅಭಿಪ್ರಾಯಗಳನ್ನು ಯಾರು ಒಪ್ಪುವುದಿಲ್ಲವೊ ಅವರ ವಿರುದ್ದ ದಾಳಿ ಮಾಡುತ್ತಾರೆ” ಎಂದು ಗೊನ್ಸಾಲ್ವೆಸ್ ವಾದಿಸಿದರು.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ: ಫ್ಯಾಕ್ಟ್‌ಚೆಕ್

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಣಾ
ಇದನ್ನೂ ಓದಿ: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...