Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಜುಬೇರ್‌ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರು.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದ್ದು, ದೆಹಲಿ ಹೈಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಉಪ ಆಯುಕ್ತ ಸೈಬರ್ ಸೆಲ್‌ಗೆ 8 ವಾರಗಳಲ್ಲಿ ಈ ಪ್ರಕರಣದಲ್ಲಿ ನಡೆಸಿದ ತನಿಖೆಯ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಮೊಹಮ್ಮದ್ ಜುಬೈರ್ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಜುಬೇರ್‌ ಪರವಾಗಿ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, “ಅರ್ಜಿದಾರರು ಸಮರ್ಪಿತ ಪ್ರಜೆಯಾಗಿದ್ದು, ಆಲ್ಟ್‌‌ನ್ಯೂಸ್‌ನ ಸಹಸಂಸ್ಥಾಪಕರಾಗಿದ್ದಾರೆ. ಅವರು ತಮ್ಮ ಸುದ್ದಿವಾಹಿನಿಯ ಮೂಲಕ ಯಾವುದೇ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ಪಕ್ಷಪಾತವಿಲ್ಲದೆ ತಪ್ಪು ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ. ಇದಕ್ಕಾಗಿ ಅವರ ಮೇಲೆ ರಾಜಕೀಯ ವ್ಯಕ್ತಿ ಹಾಗೂ ಪಕ್ಷಗಳ ಅಂಧ ಅಭಿಮಾನಿಗಳು ನಿಂದನೆ, ಬೆದರಿಕೆ ಹಾಗೂ ಅವರೊಂದಿಗೆ ಹೀನಾಯವಾಗಿ ವರ್ತಿಸುತ್ತದೆ” ಎಂದು ವಾದಿಸಿದರು.

“ಪ್ರಸ್ತುತ ದೂರು ಸಲ್ಲಿಸಿದವರು ಗಂಭೀರ ಕಿರುಕುಳ ನೀಡುವವರಾಗಿದ್ದು, ಅವರು ಉದಾರವಾದಿ, ಪ್ರಗತಿಪರ ದೃಷ್ಟಿಕೋನಗಳಿರುವ ಹಾಗೂ ಸರ್ಕಾರದ ಅಭಿಪ್ರಾಯಗಳನ್ನು ಯಾರು ಒಪ್ಪುವುದಿಲ್ಲವೊ ಅವರ ವಿರುದ್ದ ದಾಳಿ ಮಾಡುತ್ತಾರೆ” ಎಂದು ಗೊನ್ಸಾಲ್ವೆಸ್ ವಾದಿಸಿದರು.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ: ಫ್ಯಾಕ್ಟ್‌ಚೆಕ್

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಣಾ
ಇದನ್ನೂ ಓದಿ: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....